Punjab: ಸಿ ಎಂ ನಿವಾಸದೆದುರು ರೈತರ ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್…
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ನಿವಾಸದ ಮುಂದೆ ಬುಧವಾರ ರೈತರು ನಡೆಸುತ್ತಿದ್ದ ಪ್ರತಿಭಟನೆಯು ಉದ್ವಿಗ್ನತೆಗೆ ತಿರುಗಿದೆ. ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಅನೇಕರನ್ನ ವಶಕ್ಕೆ ತೆಗೆದುಕೊಂಡಿದ್ದಾರೆ. ಭಗವಂತ್ ಮಾನ್ ಸದ್ಯ ಗುಜರಾತ್ ನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದಾರೆ.
ಕಾನೂನಾತ್ಮಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೆದ್ದಾರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ತಡೆದ ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಹತೋಟಿಗೆ ತರಲು ಲಾಠಿ ಪ್ರಹಾರ ನಡೆಸಿದ್ದಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ ಕನಿಷ್ಠ ಕೂಲಿಯನ್ನು 700 ರೂ.ಗೆ ಹೆಚ್ಚಿಸಬೇಕು, ಗ್ರಾಮೀಣ ಸಹಕಾರಿ ಸಂಘಗಳಲ್ಲಿ ದಲಿತರಿಗೆ ಶೇ.33 ರಷ್ಟು ಪ್ರಾತಿನಿಧ್ಯ ನೀಡಬೇಕು, ಭೂಸ್ವಾಧೀನ ಪರಿಹಾರ ಹೆಚ್ಚಿಸಬೇಕು, ಲಂಪಿಸ್ಕಿಲಿನಿಂದ ಸತ್ತ ಜಾನುವಾರುಗಳಿಗೆ ಪರಿಹಾರ ನೀಡಬೇಕು. ರೋಗ, ಹಾನಿಗೊಳಗಾದ ಬೆಳೆಗಳಿಗೆ ಮರುಪಾವತಿ ಬಿಡುಗಡೆ ಮಾಡಬೇಕು ಮತ್ತು ಬೆಳೆ ಸುಟ್ಟವರ ವಿರುದ್ಧ ಎಫ್ಐಆರ್ಗಳನ್ನು ರದ್ದುಗೊಳಿಸಬೇಕು ಎಂದು ರೈತರು ಒತ್ತಾಯಿಸಿದರು.
ಲಾಠಿ ಚಾರ್ಜ್ ದುರದೃಷ್ಟಕರ: ಸಾದ್
ಶಿರೋಮಣಿ ಅಕಾಲಿದಳದ ಮುಖಂಡ ಮಹೇಶಿಂದರ್ ಸಿಂಗ್ ಗ್ರೆವಾಲ್ ಅವರು ರೈತರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. ಲಾಠಿ ಚಾರ್ಜ್ ದುರದೃಷ್ಟಕರ ಮತ್ತು ಇದು ಎಎಪಿಯ ಬೂಟಾಟಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ಗುಜರಾತ್ ಚುನಾವಣೆಯಲ್ಲಿ ಕೇಜ್ರಿವಾಲ್ ಪಂಜಾಬ್ ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಆರೋಪಿಸಿದ್ದಾರೆ.
Punjab Police lathicharge labour unions protesting outside CM Bhagwant Mann’s residence