ಚಂಡೀಗಢ : ಪಂಜಾಬ್ ನಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ. ಅಲ್ಲಿನ ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಘೋಷಣೆ ಮಾಡಿದೆ.
ಈಗಾಗಲೇ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆದೇಶ ನೀಡಿದ್ದು, ಅಮೃತಸರ್, ಗುರುದಾಸ್ಪುರ್ ಹಾಗೂ ಠರನ್ನಲ್ಲಿ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಇದರ ಜತೆಗೆ 25 ಜನರನ್ನು ಬಂಧಿಸಲಾಗಿದ್ದು, 750 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಬಕಾರಿ ಅಧಿಕಾರಿಗಳು, ಇಬ್ಬರು ಡಿಎಸ್ಪಿ ಸೇರಿ ಆರು ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.