ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಬಾರ್ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ವಿಧಾನದ ಅಂಗವಾಗಿ ಧ್ವಜಾರೋಹಣ ನಡೆಸುವುದರೊಂದಿಗೆ ಜಾತ್ರೆಗೆ ಇಂದು ಬೆಳಿಗ್ಗೆ ವಿದ್ಯುಕ್ತ ಚಾಲನೆ ನೀಡಲಾಯಿತು.
ಲಕ್ಷಾಂತರ ಜನ ಆಗಮಿಸುವ ಪುತ್ತೂರಿನ ಜಾತ್ರೆಗೆ ಈ ಬಾರಿ ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕರಿಗೆ ಪ್ರವೇಶವಿರಲಿಲ್ಲ. ತಂತ್ರಿಗಳು, ಅರ್ಚಕರ ಉಪಸ್ಥಿತಿಯಲ್ಲಿ ಹತ್ತೂರು ಒಡೆಯನ ಜಾತ್ರೋತ್ಸವದ ಸಾಂಪ್ರದಾಯಿಕ ಧ್ವಜಾರೋಹಣವನ್ನು ಬೆಳಿಗ್ಗೆ 9.50ಕ್ಕೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗರುಡ, ಧ್ವಜಸ್ಥಂಭಕ್ಕೆ ಪ್ರದಕ್ಷಿಣೆ ಹಾಕಿದ್ದು, ಆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...








