R. Ashok | ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾಗಲ್ಲ
ಬೆಂಗಳೂರು : ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇಂದು ಸುಪ್ರೀಂ ಕೋರ್ಟ್ ಹಿಜಾಬ್ ವಿಚಾರವಾಗಿ ತೀರ್ಪು ನೀಡಿದ್ದು, ಈ ಬಗ್ಗೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ.
ಸುಪ್ರೀಂ ಕೋರ್ಟ್ ನಲ್ಲಿ ಭಿನ್ನ ತೀರ್ಪು ಬಂದಿದೆ. ಸರ್ಕಾರಿ ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಹಾಕೋದಕ್ಕೆ ಅನುಮತಿ ಇಲ್ಲ ಎಂದು ತಿಳಿಸಿದರು.
ಸಮವಸ್ತ್ರ ಜಾರಿ ಬಗ್ಗೆ ಸರ್ಕಾರ ಕಡ್ಡಾಯ ಮಾಡಿದೆ, ಹೈಕೋರ್ಟ್ ನಲ್ಲಿ ನಮ್ಮ ಪರ ತೀರ್ಪು ಬಂದಿದೆ,
ಸುಪ್ರೀಂ ಕೋರ್ಟ್ ನಲ್ಲಿ ಭಿನ್ನ ತೀರ್ಪು ಬಂದಿದೆ. ಸಿ ಜೆ ಐ ಬೇಂಜ್ ನಲ್ಲೂ ನಮ್ಮ ನಿಲುವು ಮಂಡನೆ ಮಾಡುತ್ತೇವೆ.
ಶಾಲಾ ಹಂತದಲ್ಲಿ ಕೋಮು ಭಾವನೆ ಬರಬಾರದು. ಖಾಸಗಿ ಶಾಲೆಗಳಲ್ಲಿ ಅವರದೇ ಆದ ಸಮವಸ್ತ್ರ ಇರುತ್ತೆ.
ಅದರಂತೆ ಖಾಸಗಿ ಶಾಲೆಗಳು ಪಾಲನೆ ಮಾಡುತ್ತಿದ್ದೇವೆ. ಮುಸ್ಲಿಂ ರಾಷ್ಟ್ರಗಳಾದ ಇರಾನ್ ನಲ್ಲೂ ಹಿಜಾಬ್ ಬಗ್ಗೆ ಪರ- ವಿರೋಧ ಚರ್ಚೆ ನಡೆಯುತ್ತಿದೆ.
ಹಿಜಾಬ್ ವಿಚಾರದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವರು ಮತ್ತೆ ಸ್ಪಷ್ಟಪಡಿಸಿದ್ದಾರೆ.