ಲಾಕ್ ಡೌನ್ ಬಗ್ಗೆ ಸುಳಿವು ನೀಡಿದ ಆರ್.ಅಶೋಕ್ R. Ashok saaksha tv
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿ ಲಾಕ್ ಡೌನ್ ಸುಳಿವು ನೀಡಿದ್ದಾರೆ.
ಕೊರೊನಾ ಸೋಂಕು ಹೆಚ್ಚಳ ಬಗ್ಗೆ ಮುಖ್ಯಮಂತ್ರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ.
ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಜನವರಿ 7 ಕ್ಕೂ ಮುನ್ನ ಒಂದು ಸಭೆ ಮಾಡುತ್ತೇವೆ. ಆ ಸಭೆಯಲ್ಲಿ ಹೊಸ ಟಫ್ ರೂಲ್ಸ್ ತರುತ್ತೇವೆ ಎಂದು ತಿಳಿಸಿದರು.
ಇನ್ನು ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ ಜಾರಿ ಮಾಡಲಾಗುತ್ತದೆ. ಇದಕ್ಕೆ ಜನರು ಸಹಕರಿಸಬೇಕಾಗುತ್ತದೆ.
ಇಲ್ಲವಾದಲ್ಲಿ ಪಶ್ಚಿಮ ಬಂಗಾಳ, ಮುಂಬೈ ಮಾದರಿಯಲ್ಲಿ ಬೆಂಗಳೂರಿನಲ್ಲೂ ಲಾಕ್ಡೌನ್ ಮಾಡಬೇಕಾಗುತ್ತದೆ ಎಂದು ಅಶೋಕ್ ಎಚ್ಚರಿಸಿದರು.