ರಾಜ್ಕೋಟ್: ಭಾರತೀಯ ಕ್ರಿಕೆಟ್ ನ ಸ್ಪಿನ್ನರ್ ಆರ್ ಅಶ್ವಿನ್ ಮೂರನೇ ಟೆಸ್ಟ್ ಪಂದ್ಯದಿಂದ ದಿಢೀರ್ ಮನೆಗೆ ತೆರಳಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 10 ಆಟಗಾರರೊಂದಿಗೆ ಆಡುತ್ತಿದೆ.
ಅಶ್ವಿನ್ ಬದಲು ಫೀಲ್ಡಿಂಗ್ನಲ್ಲಿ ಬದಲಿ ಆಟಗಾರನನ್ನು ಆಡಿಸಲು ಅವಕಾಶವಿದೆ. ಮೂರನೇ ಟೆಸ್ಟ್ ಪಂದ್ಯದ ಮುಂದಿನ ಭಾಗದಲ್ಲಿ ಅಶ್ವಿನ್ ಅವರ ಸೇವೆ ತಂಡಕ್ಕೆ ಸಿಗುವುದಿಲ್ಲ. ಕುಟುಂಬದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾದ ಹಿನ್ನೆಲೆಯಲ್ಲಿ ಅವರು ಮರಳಿ ಹೋಗಿದ್ದಾರೆ ಎಂದು ಬಿಸಿಸಿಐ ಹೇಳಿದೆ.
ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಕುರಿತು ಮಾಹಿತಿ ನೀಡಿದ್ದು, ಅಶ್ವಿನ್ ಅವರ ತಾಯಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
ಅವರು ರಾಜ್ಕೋಟ್ ತೊರೆದು ಶೀಘ್ರವೇ ತಾಯಿಯನ್ನು ನೋಡಲು ಚೆನ್ನೈಗೆ ತೆರಳಬೇಕು ಎಂದು ತಿಳಿಸಿದ್ದಾರೆ. ಅವರ ಕುಟುಂಬಕ್ಕೆ ಬಿಸಿಸಿಐ ಅಗತ್ಯ ಬೆಂಬಲ ನೀಡುತ್ತದೆ. ಆಟಗಾರರು ಮತ್ತು ಅವರ ಪ್ರೀತಿಪಾತ್ರರ ಆರೋಗ್ಯ ಮತ್ತು ಯೋಗಕ್ಷೇಮವು ಅತ್ಯಂತ ಮಹತ್ವದ್ದಾಗಿದೆ. ಅಶ್ವಿನ್ ಮತ್ತು ಅವರ ಕುಟುಂಬದವರು ಈ ಸವಾಲಿನ ಸಮಯದಲ್ಲಿ ಖಾಸಗಿತನವನ್ನು ಮಂಡಳಿ ಗೌರವಿಸುತ್ತದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.