2ನೇ ಟೆಸ್ಟ್ ಸೋತ ಟೀಂ ಇಂಡಿಯಾಗೆ ಶಾಕ್….! rahul-dravid Saaksha tv
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಸೋಲಿನಿಂದ ಚೇತರಿಸಿಕೊಳ್ಳುವಷ್ಟರಲ್ಲಿ ಭಾರತಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಲಿದೆ.
ಟೀಂ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಗಾಯದ ಸಮಸ್ಯೆಯಿಂದ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡಿದ್ದ ಸಿರಾಜ್ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್, ಸಿರಾಜ್ ಗಾಯದ ಬಗ್ಗೆ ಮಾಹಿತಿ ನೀಡಿದರು.
“ಸಿರಾಜ್ ಮಂಡಿರಜ್ಜು ಗಾಯದಿಂದ ತಕ್ಷಣ ಚೇತರಿಸಿಕೊಳ್ಳುವುದು ತುಂಬಾ ಕಷ್ಟ, ಮೊದಲ ಇನ್ನಿಂಗ್ಸ್ನಲ್ಲಿ ಸಿರಾಜ್ ಗಾಯದಿಂದ ನಿರ್ಗಮಿಸಿರುವುದು ನಮಗೆ ದೊಡ್ಡ ಹಿನ್ನಡೆಯಾಗಿದೆ.
ಒಂದು ವೇಳೆ ಕೇಪ್ ಟೌನ್ ಪಂದ್ಯಕ್ಕೆ ಸಿರಾಜ್ ದೂರವಾದರೇ ಉಮೇಶ್ ಯಾದವ್, ಅಥವಾ ಇಶಾಂತ್ ಗೆ ಅವಕಾಶ ಸಿಗಬಹುದು.
ಜೋಹಾನ್ಸ್ಬರ್ಗ್ನಲ್ಲಿ ನಡೆದ ಎರಡನೇ ಟೆಸ್ಟ್ನಲ್ಲಿ, ದಕ್ಷಿಣ ಆಫ್ರಿಕಾವು ಟೀಮ್ ಇಂಡಿಯಾವನ್ನು 7 ವಿಕೆಟ್ಗಳಿಂದ ಸೋಲಿಸಿ ಮೂರು–ಟೆಸ್ಟ್ ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಿತು,