‘ನನಗೆ ಒಳ್ಳೆಯ ಚಿಕಿತ್ಸೆ ಸಿಕ್ಕಿದ್ದರೆ ಬದುಕುತ್ತಿದ್ದೆ’ , ನಟ ರಾಹುಲ್ ಸಾವಿಗೂ ಮುನ್ನ ಬರೆದುಕೊಂಡಿದ್ದ ಭಾವುಕ ಸಾಲು…
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದುಃಖದಲ್ಲಿದ್ದಾರೆ.
ಇದೀಗ ಕೊರೊನಾಗೆ ಮತ್ತೊಬ್ಬ ನಟ ಬಲಿಯಾಗಿದ್ದಾರೆ. ನಟ ಹಾಗೂ ಯುಟ್ಯೂಬರ್ ರಾಹುಲ್ ವೊಹ್ರಾ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಸಾವಿಗೂ ಮುನ್ನ ನಟ ನನಗೂ ಒಳ್ಳೆಯ ಚಿಕಿತ್ಸೆ ದೊರೆತಿದ್ದರೆ ಬದುಕುಳಿಯುತ್ತಿದ್ದೆ ಎಂದು ಬಾವುಕರಾಗಿ ಟ್ವೀಟ್ ಮಾಡಿದ್ದ ಸಾಲುಗಳು ನೆಟ್ಟಿಗರನ್ನೂ ಭಾವುಕರನ್ನಾಗಿಸಿದೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ರಾಹುಲ್, ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿಗೂ ಒಂದು ದಿನದ ಮುಂಚೆ ಅಂದರೆ ( ಮಾ.8 )ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ರಾಹುಲ್, ನನಗೂ ಉತ್ತಮ ಚಿಕಿತ್ಸೆ ಸಿಕ್ಕಿದ್ದಿದ್ದರೆ ನಾನೂ ಬದುಕುಳಿಯಬಹುದಿತ್ತು ಎಂದು ಬರೆದಿದ್ದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿಯ ಡಿಸಿಎಂ ಮನಿಶ್ ಸಿಸೋಡಿಯಾ ಅವರ ಹೆಸರುಗಳನ್ನು ಉಲ್ಲೇಖಿಸಿ, ‘ಬಹಳ ಬೇಗನೇ ಮತ್ತೆ ಹುಟ್ಟಿ ಬರುತ್ತೇನೆ. ಒಳ್ಳೆ ಕೆಲಸ ಮಾಡುತ್ತೇನೆ’ . ಈಗ ಧೈರ್ಯ ಕಳೆದುಕೊಂಡಿದ್ದೇನೆ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದರು.
(35) ರಾಹುಲ್ ವೊಹ್ರಾ ಅವರು ಅನ್ ಫ್ರೀಡಂ ಚಿತ್ರದ ಮೂಲಕ ಭಾರಿ ಪ್ರಸಿದ್ಧಿಗೆ ಬಂದವರು. ರಂಗಭೂಮಿ ಮತ್ತು ಕಿರುತೆರೆಗಳಲ್ಲಿ ಸಾಕಷ್ಟು ಹೆಸರು ಗಳಿಸಿದ್ದರು. ಕ್ಷಮಿಸು ರಾಹುಲ್, ನಿನ್ನನ್ನು ಬದುಕಿಸಿಕೊಳ್ಳದ ನಾವು ಅಪರಾಧಿಗಳು. ನಿನಗೆ ನನ್ನ ಅಂತಿಮ ನಮನಗಳು ಎಂದು ಅನ್ ಫ್ರೀಡಂ ಚಿತ್ರದ ನಿರ್ದೇಶಕ ಅರವಿಂದ್ ಗೌರ್ ಸಂತಾಪ ಸೂಚಿಸಿದ್ದಾರೆ.