ಹೊಸದಿಲ್ಲಿ, ಮೇ 14 : ಮಂಗಳವಾರದಿಂದ ದೇಶದ ಆಯ್ದ ಮಾರ್ಗಗಳಲ್ಲಿ ರೈಲು ಸಂಚಾರ ಸೇವೆ ಪುನಾರಾರಂಭಗೊಂಡಿದೆ. ಭಾರತೀಯ ರೈಲ್ವೆ, ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬೇಕೆಂದು ಆದೇಶಿಸಿದೆ. ಈ ಮೊದಲು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಪೂರ್ವ ಷರತ್ತು ಅಲ್ಲ ಎಂದು ಹೇಳಿದ್ದ ರೈಲ್ವೆ ಇಲಾಖೆ, ಇದೀಗ ಪ್ರಯಾಣಿಕರ ಮೊಬೈಲ್ ನಲ್ಲಿ ಈ ಆ್ಯಪ್ ಇಲ್ಲದಿದ್ದರೆ ಅವರನ್ನು ರೈಲಿನೊಳಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ತಿಳಿಸಿದೆ.
ರೈಲ್ವೆ ವಕ್ತಾರ ಆರ್.ಡಿ. ಬಾಜಪೇಯಿ ಅವರು ಈ ಬಗ್ಗೆ ಮಾತನಾಡಿದ್ದು, ಆನ್ ಲೈನ್ ಟಿಕೆಟ್ ಬುಕ್ ಮಾಡಬೇಕಾದಲ್ಲಿ ಮೊಬೈಲ್ ಫೋನ್ ಸಂಖ್ಯೆ ಇರಲೇಬೇಕು. ಹಾಗಾಗಿ ಆನ್ ಲೈನ್ ಟಿಕೆಟ್ ತೋರಿಸಲು ಪ್ರತಿಯೊಬ್ಬರು ಮೊಬೈಲ್ ತರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಮಾಡಿದ್ದು, ಪ್ರತಿಯೊಬ್ಬರು ಅದನ್ನು ನಿಲ್ದಾಣಕ್ಕೆ ಬರುವ ಮೊದಲೇ ಡೌನ್ ಲೋಡ್ ಮಾಡಿರಬೇಕು ಎಂದರು.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








