ಹೊಸದಿಲ್ಲಿ, ಮೇ 14 : ಮಂಗಳವಾರದಿಂದ ದೇಶದ ಆಯ್ದ ಮಾರ್ಗಗಳಲ್ಲಿ ರೈಲು ಸಂಚಾರ ಸೇವೆ ಪುನಾರಾರಂಭಗೊಂಡಿದೆ. ಭಾರತೀಯ ರೈಲ್ವೆ, ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬೇಕೆಂದು ಆದೇಶಿಸಿದೆ. ಈ ಮೊದಲು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಪೂರ್ವ ಷರತ್ತು ಅಲ್ಲ ಎಂದು ಹೇಳಿದ್ದ ರೈಲ್ವೆ ಇಲಾಖೆ, ಇದೀಗ ಪ್ರಯಾಣಿಕರ ಮೊಬೈಲ್ ನಲ್ಲಿ ಈ ಆ್ಯಪ್ ಇಲ್ಲದಿದ್ದರೆ ಅವರನ್ನು ರೈಲಿನೊಳಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ತಿಳಿಸಿದೆ.
ರೈಲ್ವೆ ವಕ್ತಾರ ಆರ್.ಡಿ. ಬಾಜಪೇಯಿ ಅವರು ಈ ಬಗ್ಗೆ ಮಾತನಾಡಿದ್ದು, ಆನ್ ಲೈನ್ ಟಿಕೆಟ್ ಬುಕ್ ಮಾಡಬೇಕಾದಲ್ಲಿ ಮೊಬೈಲ್ ಫೋನ್ ಸಂಖ್ಯೆ ಇರಲೇಬೇಕು. ಹಾಗಾಗಿ ಆನ್ ಲೈನ್ ಟಿಕೆಟ್ ತೋರಿಸಲು ಪ್ರತಿಯೊಬ್ಬರು ಮೊಬೈಲ್ ತರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸೇತು ಆ್ಯಪ್ ಕಡ್ಡಾಯ ಮಾಡಿದ್ದು, ಪ್ರತಿಯೊಬ್ಬರು ಅದನ್ನು ನಿಲ್ದಾಣಕ್ಕೆ ಬರುವ ಮೊದಲೇ ಡೌನ್ ಲೋಡ್ ಮಾಡಿರಬೇಕು ಎಂದರು.
Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.
ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...








