ಬೆಂಗಳೂರು : ಕಳೆದ ಕೆಲ ವಾರಗಳಿಂದ ರಾಜ್ಯದಾದ್ಯಂತ ಅಬ್ಬರಿಸುತ್ತಿದ್ದ ಮಳೆರಾಯನ ಆರ್ಭಟ ಸದ್ಯ ತಗ್ಗಿದೆ. ನಾಳೆಯಿಂದ ಈಶಾನ್ಯ ಹಿಂಗಾರು ಆರಂಭವಾಗುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆ ಆಗುವ ಸಾಧ್ಯತೆಗಳು ಹೆಚ್ಚಿವೆ. Rain again
ಹೌದು..! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ.
ಅರಬ್ಬಿಸಮುದ್ರದಲ್ಲಿ ಮೇಲ್ಮನೆ ಸುಳಿಗಾಳಿ ಉಂಟಾಗಿರುವುದರಿಂದ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ : ದುರ್ಗಾದೇವಿ ಕೆರೆಗೆ ಬಾಗೀನ ಅರ್ಪಿಸಿದ ಬಿ.ಸಿ.ಪಾಟೀಲ್
ಅಕ್ಟೋಬರ್ ತಿಂಗಳಿನಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗಿದೆ.
ನಾಳೆಯಿಂದ ಈಶಾನ್ಯ ಹಿಂಗಾರು ಆರಂಭವಾಗುವ ಮುನ್ಸೂಚನೆಗಳಿವೆ. ಹೀಗಾಗಿ ಮುಂಗಾರು ಮುಗಿಯುತ್ತಿದ್ದಂತೆ ಹಿಂಗಾರು ಮಳೆ ಕೂಡ ಆರಂಭವಾಗಲಿದೆ.
ಆದ್ರೆ ಭಾರಿ ಪ್ರಮಾಣದ ಮಳೆಯಾಗುವ ಸೂಚನೆಗಳಿವೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಶಿರಾದಲ್ಲಿ ಸದ್ದು ಮಾಡುತ್ತಿದೆ ಝಣಝಣ ಕುರುಡು ಕಾಂಚಾಣ..!
ಇನ್ನು ಇತ್ತೀಚೆಗೆ ಸುರಿದ ಮಳೆಯಿಂದಾಗಿ ಉತ್ತರಕರ್ನಾಟಕದ ಕೆಲ ಭಾಗದಲ್ಲಿ ಪ್ರವಾಹ ಉಂಟಾಗಿತ್ತು.
ಪರಿಣಾಮ ರಾಗಿ, ಶೇಂಗಾ, ಅಲಸಂದೆ, ಭತ್ತ ಮೊದಲಾದ ಬೆಳೆಗಳು ಹಾನಿಗೀಡಾಗಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel