ಇಂದೂ ಕೂಡ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ..!
ಕೆಲ ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಬಿಸಿಲು ಮಾಯವಾದಂತಹ ವಾತಾವರಣ ನಿರ್ಮಾಣವಾಗಿದೆ.. ಬಿಟ್ಟು ಬಿಡದೇ ಒಮ್ಮೆ ಧಾರಾಕಾರವಾಗಿ ಮಳೆಯಾದ್ರೆ ಮತ್ತೊಮ್ಮೆ ಜಿಟಿ ಜಿಟಿ ಮಳೆ ಜನಜೀವನವನ್ನ ಅಸ್ತವ್ಯಸ್ತಗೊಳಿಸಿದೆ.. ವಾಹನ ಸವಾರರು ಅದ್ರಲ್ಲೂ ಬೈಕ್ ಸವಾರರು ಮಳೆಯಿಂದ ಪರದಾಡಿದ್ರೆ , ಸಾರ್ವಜನಿಕರು ಮನೆಯಿಂದ ಆಚೆ ಬರೋಕು ಹಿಂದೇಟು ಹಾಕುವಂತಹ ವಾತಾವರಣವಿದೆ..
ಬೆಂಗಳೂರಷ್ಟೇ ಅಲ್ದೇ ಕೆಲ ದಿನಗಳಿಂದಲೂ ರಾಜ್ಯಾದ್ಯಂತ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ.. ಈ ನಡುವೆ ಇಂದೂ ಕೂಡ ರಾಜಧಾನಿಯಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.. ಮತ್ತೊಂದೆಡೆ ಕರಾವಳಿ ಭಾಗದಲ್ಲೂ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ. ಹೀಗಾಗಿ ಈಗಾಗಲೇ ಆರೇಂಜ್ ಅಲರ್ಟ್ ಘೋಷಣೆಯಾಗಿದೆ.. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.