ರಾಜ್ಯದಲ್ಲಿ 2 ದಿನಗಳ ಕಾಲ ಗುಡುಗು ಸಹಿತ ಭಾರೀ..!
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಪ್ರಿಲ್ 12 ರ ನಂತರ ಮಳೆ ಬಿರುಸುಗೊಳ್ಳಲಿದ್ದು, ಏಪ್ರಿಲ್ 14, 15 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಏಪ್ರಿಲ್ 14, 15 ರಂದು ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಕೋಲಾರ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ ಸೇರಿದಂತೆ ಹಲವೆಡೆ ಏಪ್ರಿಲ್ 13 ರಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇಂದಿನಿಂದ ರಾತ್ರಿ ಕರ್ಫ್ಯೂ : ಫ್ಲೈಓವರ್ ಗಳು 9.50 ರಿಂದಲೇ ಬಂದ್..!
ರಾತ್ರಿ ಕರ್ಫ್ಯೂ | ಯಾರು ಕೂಡ ಅನಾವಶ್ಯಕವಾಗಿ ಓಡಾಟ ನಡೆಸುವಂತಿಲ್ಲ : ಕಮಲ್ ಪಂತ್
ಪಶ್ಚಿಮ ಬಂಗಾಳ : ಮತಗಟ್ಟೆ ಬಳಿಯೇ 18ರ ಯುವ ಮತದಾರನಿಗೆ ಗುಂಡಿಟ್ಟು ಕೊಲೆ – TMC ಕೈವಾಡವೆಂದು ಕುಟುಂಬಸ್ಥರ ಆರೋಪ..!
ತೆಲಂಗಾಣದಲ್ಲಿ ಉದಯಿಸಲಿದೆ “ರಾಜಣ್ಣ ರಾಜ್ಯಂ”
5 ವರ್ಷದ ಬಾಲಕಿ ಮೇಲೆ 10, 12 ವರ್ಷದ ಬಾಲಕರಿಂದ ಸಾಮೂಹಿಕ ಅತ್ಯಾಚಾರ..!