ಬೆಂಗಳೂರಲ್ಲಿ ನಾನಾ ಅವಾಂತರ ಸೃಷ್ಠಿಸಿದ ಮಳೆರಾಯ bengaluru saaksha tv
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲೂ ವರುಣ ಅಬ್ಬರಿಸಿದ್ದು, ನಾನಾ ಅವಾಂತರಗಳಿಗೆ ಕಾರಣವಾಗಿದ್ದಾನೆ.
ನಿನ್ನೆ ಸಂಜೆಯಿಂದ ನಗರದಲ್ಲಿ ಧೋ ಅಂತಾ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿ ನಡುಗಿದ್ದಾರೆ.
ಮಳೆಯ ಕಾರಣ ಬಿಬಿಎಂಪಿಗೆ ಸುಮಾರು 30 ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ತಿಳಿದುಬಂದಿದೆ.
ಬಿಟ್ಟುಬಿಡದೇ ಸುರಿದ ಮಳೆಗೆ ಪುಟ್ಟೇನಹಳ್ಳಿ ಬಳಿಯ ರಸ್ತೆ ಸಂಪೂರ್ಣ ಜಲಾವೃತವಾಗಿದ್ದರೇ ಕೊಡಿಗೆಹಳ್ಳಿ ಬಳಿ ರಸ್ತೆಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ.
ಕಾಡುಗೋಡಿ, ಗೊಟ್ಟಿಗೆರೆ, ಹೊಸಕೆರೆಹಳ್ಳಿಯಲ್ಲಿ ರಸ್ತೆಗಳು ಕೂಡ ಜಲಾವೃತಗೊಂಡಿತ್ತು. ಇನ್ನು ಸುದಾಮನಗರದಲ್ಲಿ ಮನೆಗೆ ನೀರು ನುಗ್ಗಿದ್ದ ಬಗ್ಗೆ ದೂರು ದಾಖಲಾಗಿದೆ.