ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇವತ್ತು ಮತ್ತು ನಾಳ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ನಿನ್ನೆ ಮೈಸೂರು, ಮಂಡ್ಯ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಅದರಂತೆ ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಮಾಮಾನ ಇಲಾಖೆಯ ಪ್ರಕಾರ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ವರುಣ ಆರ್ಭಟಿಸಲಿದ್ದಾನಂತೆ. ಈ ಹಿನ್ನೆಲೆಯಲ್ಲಿ ಆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಐಪಿಎಲ್ 2021 : ಮುಂಬೈಗೆ ಶಾಕ್ ನೀಡುತ್ತಾ ಹೈದರಾಬಾದ್
ವಿಡಿಯೋ ಕಾನ್ಫರೆನ್ಸ್ ವೇಳೆ ಪೂರ್ತಿ ಬೆತ್ತಲಾಗಿ ಕಾಣಿಸಿಕೊಂಡ ಸಂಸದ..!