ಬೆಂಗಳೂರು: ರಾಜ್ಯದಲ್ಲಿ ಕೆಲವು ಪ್ರದೇಶಗಳಲ್ಲಿ ಮಳೆ ತನ್ನ ಆರ್ಭಟ ನಡೆಸಿದ್ದು, ಜನ -ಜೀವನ ಅಸ್ತವ್ಯಸ್ಥಗೊಂಡಿದೆ. ಅದರಲ್ಲಿಯೂ ಸಿಲಿಕಾನ್ ಸಿಟಿಯಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ.
ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಯಲಹಂಕ ಕೆರೆ ಕೋಡಿಬಿದ್ದು ಕೋಗಿಲು ಸರ್ಕಲ್, ಕೇಂದ್ರೀಯ ಅಪಾರ್ಟ್ಮೆಂಟ್, ಏರ್ಪೋರ್ಟ್ ರೋಡ್ ಸಂಪೂರ್ಣವಾಗಿ ನೀರಿನಿಂದ ಜಲಾವೃತವಾಗುವಂತಾಗಿತ್ತು. ಹಲವು ನಗರಗಳಲ್ಲಿನ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗೆಳಿಗೆ ನುಗ್ಗಿ, ಜನರು ಪರದಾಟ ನಡೆಸುವಂತಾಗಿದೆ. ರಾಜಕಾಲುವೆಯ ಹಿಂಭಾಗದಲ್ಲಿನ ಮನೆಗಳಿಗೆ ನೀರು ನುಗ್ಗಿ, ಜನರು ತೊಂದರೆ ಅನುಭವಿಸುವಂತಾಗಿತ್ತು.
ಸಿಲಿಕಾನ್ ಸಿಟಿಯಲ್ಲಿ ನೋಡುವುದಾದರೆ ಯಲಹಂಕದಲ್ಲಿ ಗರಿಷ್ಠ 164 ಮಿ.ಮೀ ಮಳೆಯಾಗಿದೆ. ರಾಜ್ಯದ ವಿವಿಧೆಡೆ ಕೂಡ ಭರ್ಜರಿ ಮಳೆಯಾಗಿದೆ. ಕಡೂರಿನ ಮಚ್ಚೇರಿಯಲ್ಲಿ ಗೋಡೆ ಕುಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೈಸೂರು, ರಾಮನಗರ, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಿದೆ.