ರಾಜ್ ಕುಂದ್ರಾ ಕೇಸ್ ನಲ್ಲಿ ಹೊಸ ಟ್ವಿಸ್ಟ್ – ಮುಂಬೈ ಪೊಲೀಸರ ವಿರುದ್ಧವೇ ಗೆಹನಾ ಆರೋಪ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ , ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಕೆಲವರು ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ರೆ ಅವರಿಗೆ ಕೆಲವರು ಬೆಂಬಲಿಸುತ್ತಿರುವುದೂ ಇದೆ.. ಅಂತಹವರ ಪೈಕಿ ಒಬ್ಬರು ಮಾಡೆಲ್ , ನಟಿ ಗೆಹನಾ. ಆರಂಭದಿoದಲೂ ಗೆಹನಾ ರಾಜ್ ಕುಂದ್ರಾಗೆ ಬೆಂಬಲ ಸೂಚಿಸುತ್ತಲೇ ಬಂದಿದ್ದಾರೆ.. ರಾಜ್ ಕುಂದ್ರಾ ಪ್ರಕರಣವು ದಿನೇ-ದಿನೇ ಹೊಸ ತಿರುವುಗಳನ್ನು ತೆಗೆದುಕೊಳ್ಳುತ್ತಲೇ ಇದೆ. ರಾಜ್ ಕುಂದ್ರಾ ಅನ್ನು ಉದ್ದೇಶಪರ್ವಕವಾಗಿ ಪ್ರಕರಣದಲ್ಲಿ ಸಿಕ್ಕಿ ಹಾಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗೆಹನಾ ವಸಿಷ್ಠ ಸಂರ್ಶನವೊಂದರಲ್ಲಿ ಮಾತನಾಡಿದ್ದು, ಮುಂಬೈ ಪೊಲೀಸರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
ಅಂದ್ಹಾಗೆ ಗೆಹನಾ ಫೆಬ್ರವರಿಯಲ್ಲಿ ಇದೇ ಪ್ರಕರಣ ಸಂಬoಧ ಬಂಧನಕ್ಕೆ ಒಳಗಾಗಿ 5 ತಿಂಗಳುಗಳ ಕಾಲ ಸೆರೆವಾಸವನ್ನೂ ಅನುಭವಿಸಿದ್ದರು. ಇದೀಗ ರಾಜ್ ಕುಂದ್ರಾ ಪರ ಮಾತನಾಡಿದ್ದು, ಮುಂಬೈ ಪೊಲೀಸರ ವಿರುದ್ಧ ಆರೋಪ ಹೊರಿಸಸಿದ್ದಾರೆ. ಮುಂಬೈ ಪೊಲೀಸರು ರಾಜ್ ಕುಂದ್ರಾ ಅನ್ನು ಸಿಕ್ಕಿಹಾಕಿಸಲು ಉದ್ದೇಶಪರ್ವಕವಾಗಿ ವ್ಯೂಹ ಹೆಣೆದಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಮುಂಬೈ ಪೊಲೀಸರ ಮೇಲೆ ಲಂಚಕ್ಕೆ ಬೇಡಿಕೆ ಇಟ್ಟ ಆರೋಪವನ್ನು ಸಹ ಗೆಹನಾ ವಸಿಷ್ಠ ಹೊರಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮೊದಲು ಬಂಧನಕ್ಕೆ ಒಳಪಟ್ಟಿದ್ದ ಗೆಹನಾಗೆ ವಿಚಾರಣೆ ವೇಳೆ ಬಾಲಿವುಡ್ನ ಖ್ಯಾತ ನಾಮರ ಹೆಸರನ್ನು ಪ್ರಕರಣದಲ್ಲಿ ಹೇಳುವಂತೆ ಒತ್ತಾಯ ಮಾಡಲಾಗ್ತಿತ್ತು ಎಂದು ಸ್ವತಃ ಗೆಹನಾ ವಸಿಷ್ಠ ಹೇಳಿದ್ದಾರೆ.
ಅಷ್ಟೇ ಅಲ್ಲದೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಹಾಗೂ ಖ್ಯಾತ ನರ್ಮಾಪಕಿ ಏಕ್ತಾ ಕಪೂರ್ ಹೆಸರನ್ನು ಹೇಳುವಂತೆ ಮುಂಬೈ ಪೊಲೀಸರು ನನ್ನ ಮೇಲೆ ಒತ್ತಡ ಹೇರಿದ್ದರು. ಆದರೆ ನಾನು ಅವರಿಬ್ಬರ ಹೆಸರನ್ನು ಹೇಳಲಿಲ್ಲ ಎಂದಿದ್ದಾರೆ. ಅಲ್ಲದೇ ನಿಮ್ಮನ್ನು ಬಂಧಿಸಬಾರದು ಎಂದರೆ ನಮಗೆ 15 ಲಕ್ಷ ಹಣ ಕೊಡಿ ಎಂದು ಲಂಚಕ್ಕೆ ಒತ್ತಾಯಿಸಿದ್ದರು” ಎಂದು ಸಹ ಗೆಹನಾ ಆರೋಪ ಮಾಡಿದ್ದಾರೆ. ನನ್ನ ಮನೆಯಲ್ಲಿ ಕುಳಿತುಕೊಂಡು ಪೊಲೀಸರು ನನಗೆ ಲಂಚದ ಬೇಡಿಕೆ ಇಟ್ಟರು ಎಂದು ಗೆಹನಾ ಹೇಳಿದ್ದಾರೆ.
ರಾಷ್ಟ್ರೀಯ ಮಾಧ್ಯಮಗಳಲ್ಲಿ ಶಿಲ್ಪಾ ಶೆಟ್ಟಿ ಅವರ ಹೆಸರನ್ನ ಪದೇ ಪದೇ ಪ್ರಸ್ತಾಪಿಸುತ್ತಾ ಇರೋದಕ್ಕೆ ಶಿಲ್ಪಾ ಶೆಟ್ಟಿ ತಿರುಗಿಬಿದ್ದಿದ್ದರು. ಪ್ರಕರಣ ಆರಂಭದಿಂದಲೂ ಶಿಲ್ಪಾ ಶೆಟ್ಟಿ ಹಾಗೂ ತಂಗಿ ಶಮಿತಾ ಕೂಡ ಕುಂದ್ರಾ ಜೊತೆಗೆ ಟ್ರೋಲ್ ಆಗ್ತಾ ಇದ್ದಾರೆ.. ಹೀಗಾಗಿ 29 ಮಾಧ್ಯಮ ಸಿಬ್ಬಂದಿ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಶಿಲ್ಪಾ ಶೆಟ್ಟಿ ಬಾಂಬೆ ಹೈಕರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಹೌದು.. ಪತಿ ರಾಜ್ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಆರೋಪಿಸಿದ್ದರು. ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.
“ಬಲವಂತವಾಗಿ ಕಿಸ್ ಮಾಡಲು ಬಂದ್ರು, ಹೆದರಿ ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದೆ” – ಕುಂದ್ರಾ ವಿರುದ್ಧ ಶರ್ಲಿನ್ ಆರೋಪ
ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಆದ್ರೆ ಶಿಲ್ಪಾ ಶೆಟ್ಟಿಗೆ ಕರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಾಧ್ಯಮಗಳು ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಕರ್ಟ್ಗೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು. ಅಲ್ಲದೆ, ತಮಗೆ 25 ಕೋಟಿ ರೂ. ಮತ್ತು ಅದರೊಂದಿಗೆ ರ್ಷಕ್ಕೆ ಶೇ.18 ಬಡ್ಡಿಯೊಂದಿಗೆ ಹಣ ಪಾವತಿಸಬೇಕು ಎಂದು ಕೋರಿದ್ದರು. ಈ ಕುರಿತಾಗಿ ಕರ್ಟ್ ಶಿಲ್ಪಾ ಶೆಟ್ಟಿಯವರನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮರ್ತಿ ಜಿಎಸ್ ಪಟೇಲ್ ಅವರು ಈ ರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡರು. ಓದುಗರನ್ನು ಸೆಳೆಯಲು ತಪ್ಪಾದ ಸುದ್ದಿ ಪ್ರಕಟ ಮಾಡಲಾಗಿದೆ ಎಂದು ಶಿಲ್ಪಾ ಶೆಟ್ಟಿ ಪರ ವಕೀಲರು ವಾದ ಮಂಡಿಸಿದರು. ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು. ಸರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ.
ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು ಪೊಲೀಸ್ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ, ಎಂದು ನ್ಯಾಯಮರ್ತಿ ಜಿಎಸ್ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ. ರಾಜ್ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಹೆಸರು ಮುನ್ನೆಲೆಗೆ ಬಂದಿತ್ತು. ಇವರ ಬಗ್ಗೆ ನಾನಾ ಸುದ್ದಿಗಳು ಪ್ರಸಾರಗೊಂಡವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಾ ಬಾಂಬೆ ಹೈಕರ್ಟ್ ಮೆಟ್ಟಿಲೇರಿದ್ದು, ಮಾನನಷ್ಟ ಮೊಕದ್ದಮೆ ಸಲ್ಲಿಕೆ ಮಾಡಿದ್ದಾರೆ.
ಶೂಟಿಂಗ್ ವೇಳೆ ಜಾರಿ ಬಿದ್ದು ಗಾಯಗೊಂಡ ‘ಮಾಸ್ಟರ್ ಪೀಸ್’ ಸುಂದರಿ ಶಾನ್ವಿ..!
ಮಾಧ್ಯಮದವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದ ಶಿಲ್ಪಾ ಶೆಟ್ಟಿಗೆ ನ್ಯಾಯಾಲಯದಲ್ಲಿ ಮುಖಭಂಗ..!