ರಜಿನಿಕಾಂತ್ ನಿರ್ಧಾರದಿಂದ ನಿರಾಸೆಯಾಗಿದೆ : ಕಮಲ್ ಹಾಸನ್
ಚೆನ್ನೈ : ಆರೋಗ್ಯದ ಕಾರಣಗಳನ್ನ ಹೇಳಿ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಹೇಳಿರುವ ರಜಿನಿಕಾಂತ್ ನಿರ್ಧಾರದಿಂದ ನನಗೂ ನಿರಾಸೆಯಾಗಿದೆ ಎಂದು ಮಕ್ಕಳ್ ನೀಧಿ ಮಯ್ಯಮ್ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಹೇಳಿದ್ದಾರೆ.
ಚಿತ್ರದ ಶೂಟಿಂಗ್ ವೇಳೆ ತಲೈವಾ ರಜಿನಿಕಾಂತ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನ ಹೈದರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆಸ್ಪತ್ರೆಯಿಂದ ಬಿಡುಗಡೆಯಾದ ಮರು ದಿನ ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಪ್ರಚಾರದ ಬಳಿಕ ಅವರನ್ನು ಭೇಟಿಯಾಗುತ್ತೇನೆ. ಅವರ ಅಭಿಮಾನಿಗಳಂತೆ ನನಗೂ ನಿರಾಶೆಯಾಗಿದೆ.
ಆದರೆ ಅವರ ಆರೋಗ್ಯ ನನಗೆ ಮುಖ್ಯವಾಗಿದೆ. ಅವರು ಆರೋಗ್ಯವಾಗಿರಬೇಕು ಮತ್ತು ಚೆನ್ನಾಗಿರಬೇಕು ಎಂದು ತಿಳಿಸಿದರು.
ಇನ್ನು ರಜನಿಕಾಂತ್ ಅವರು ಡಿಸೆಂಬರ್ 31 ರಂದು ರಾಜಕೀಯ ಪ್ರವೇಶ ಮತ್ತು ತಮ್ಮ ಪಾರ್ಟಿ ಬಗ್ಗೆ ಸಂಪೂರ್ಣ ಮಾಹಿತಿ ನೀಡೋದಾಗಿ ಈ ಹಿಂದೆ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









