ADVERTISEMENT
Wednesday, July 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಮಿಳುನಾಡಲ್ಲಿ `ಬಿಜೆಪಿ ಬಲ ಹೆಚ್ಚಿಸುತ್ತಾರಾ ತಲೈವಾ’..?

Mahesh M Dhandu by Mahesh M Dhandu
November 2, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ತಮಿಳುನಾಡಲ್ಲಿ `ಬಿಜೆಪಿ ಬಲ ಹೆಚ್ಚಿಸುತ್ತಾರಾ ತಲೈವಾ’..?

ಚೆನ್ನೈ : ತಮಿಳು ಚಿತ್ರರಂಗದ ತಲೈವಾ, ಸೂಪರ್ ಸ್ಟಾರ್ ರಜನಿಕಾಂತ್ ( Rajinikanth )  ರಾಜಕೀಯ ಪ್ರವೇಶ ಕುರಿತು ಹಲವು ವರ್ಷಗಳಿಂದ ಚರ್ಚೆ ಆಗುತ್ತಲೇ ಇದೆ. ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ರಜನಿಕಾಂತ್  ( Rajinikanth ) ರಾಜಕೀಯ ಪ್ರವೇಶಿಸುವುದಿಲ್ಲ.

Related posts

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

July 9, 2025
ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

July 9, 2025

ಅವರು ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಬೆಳವಣಿಗೆಗಳ ಮಧ್ಯೆ ಪ್ರಸಿದ್ಧ ರಾಜಕೀಯ ತಜ್ಞ, ಬಿಜೆಪಿ ಆಪ್ತರೆಂದೇ ಗುರುತಿಸಿಕೊಂಡಿರುವ, ಆರ್ ಎಸ್ ಎಸ್ ಸಿದ್ಧಾಂತಿ ಎಸ್ ಗುರುಮೂರ್ತಿ ಅವರು ನಿನ್ನೆ ರಜನಿಕಾಂತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ತಮಿಳುನಾಡು ರಾಜಕೀಯ ವಲಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ.

Rajinikanth

ಎಸ್ ಗುರುಮೂರ್ತಿ ಅವರು ಭಾನುವಾರ ಸಂಜೆ ಪೋಯೆಸ್ ಗಾರ್ಡನ್ ನಿವಾಸದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಭೇಟಿ ಮಾಡಿ ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಗುರುಮೂರ್ತಿ ಅವರು ರಜನಿಕಾಂತ್ ಅವರನ್ನು ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಗುರುಮೂರ್ತಿ ಅವರು ರಜನಿಕಾಂತ್ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ, ಅವರು ಬಿಜೆಪಿ ಯೊಂದಿಗೆ ಹೊಂದಾಣಿಕೆ ಮಾಡಿಕೊಂಡಲ್ಲಿ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ : ಯಾರ ಪಾಲಾಗುತ್ತೆ ಕುಂಚಿಟಿಗರ ಕೋಟೆ ಶಿರಾ..?

ಬಿಜೆಪಿ ಜೊತೆ ರಜನಿ ಹೊಂದಾಣಿಕೆ..?

ರಜನಿಕಾಂತ್ ರಾಜಕೀಯ ಪ್ರವೇಶ ಕೇಳಿಬಂದಾಗಲೆಲ್ಲಾ ಬಿಜೆಪಿಯ ಹೆಸರು ಕೇಳಿಬರುತ್ತದೆ. ರಜನಿಕಾಂತ್ ಬಿಜೆಪಿಯನ್ನು ಸೇರಲಿದ್ದಾರೆ ಎಂಬ ಸುದ್ದಿಗಳು ಈ ಹಿಂದೆ ಸದ್ದು ಮಾಡಿದ್ದವು.

ಮುಂದಿನ ವರ್ಷ ತಮಿಳುನಾಡು ವಿಧಾನ ಸಭೆ ಚುನಾವಣೆ ನಡೆಯಲಿದ್ದು, ತಮಿಳುನಾಡಿನಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಲು ನಾನಾ ಕಸರತ್ತುಗಳನ್ನು ನಡೆಸುತ್ತಿದೆ.

ಅದರಂತೆ ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವ ಬಿಜೆಪಿ ಅವರಿಗೆ ರಾಜ್ಯ ಉಪಾಧ್ಯಕ್ಷ ಪಟ್ಟ ನೀಡಿದೆ. ಇನ್ನು ಮೊನ್ನೆಯಷ್ಟೆ ಕಾಂಗ್ರೆಸ್ ನಲ್ಲಿದ್ದ ನಟಿ ಖುಷ್ಬೂ ಅವರನ್ನೂ ಪಕ್ಷಕ್ಕೆ ಸೆಳೆಯುವಲ್ಲಿ ಕೇಸರಿ ಪಡೆ ಯಶಸ್ವಿಯಾಗಿದೆ.

ಆ ಮೂಲಕ ದ್ರಾವಿಡ ನಾಡಲ್ಲಿ ಕೇಸರಿ ಬಾವುಟ ಹಾರಿಸಿಲು ಕಮಲ ಪಡೆ ಪ್ಲಾನ್ ಮಾಡಿಕೊಳ್ಳುತ್ತಿದೆ.

ಕೇಸರಿ ಪಡೆಗೆ ಬೇಕು `ಸೂಪರ್’ ಬಲ..!

Rajinikanth

ಹೌದು..! ತಮಿಳುನಾಡಿನಲ್ಲಿ ಬಿಜೆಪಿ ಗಟ್ಟಿಯಾಗಿ ನೆಲ ನಿಲ್ಲುವುದು ಅಷ್ಟು ಸುಲಭವಾದ ಮಾತಲ್ಲ. ಏಕೆಂದರೇ ಅಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಜನರು ಹೆಚ್ಚಿನ ಆಧ್ಯತೆ ಕೊಡುತ್ತಾ ಬಂದಿದ್ದಾರೆ.

ಅದರಲ್ಲೂ ಮುಖ್ಯ ಬಿಜೆಪಿಯ ಸಿದ್ಧಾಂತಗಳನ್ನು ತಮಿಳುನಾಡಲ್ಲಿ ಜನ ಒಪ್ಪುವುದು ಕಷ್ಟ. ಹೀಗಾಗಿಯೇ ಬಿಜೆಪಿಗೆ ತಮಿಳುನಾಡಲ್ಲಿ ಮಾಸ್ ಲೀಡರ್ ನ ಅವಶ್ಯಕತೆ ಇದೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಪದೇ ಪದೇ ರಜನಿ ಮನೆಯ ಬಾಗಿಲನ್ನು ತಟ್ಟುತ್ತಲೇ ಇದ್ದಾರೆ.

ಇದನ್ನೂ ಓದಿ : ಆರ್.ಆರ್ ನಗರ, ಶಿರಾದಲ್ಲಿಂದು ಮನೆ ಮನೆ ಕ್ಯಾಂಪೇನ್; ನಾಳೆ ಓಟಿಂಗ್..!

ಒಂದು ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಜನಿಕಾಂತ್ ಸಾಥ್ ಸಿಕ್ಕಿದ್ದೇ ಆದಲ್ಲಿ ತಮಿಳುನಾಡಿನ ರಾಜಕೀಯದಲ್ಲಿ ಕ್ಷಿಪ್ರಗತಿಯ ಬೆಳವಣಿಗೆಗಳು, ಬದಲಾವಣೆಗಳು ಆಗುವ ಸಾಧ್ಯತೆಗಳು ಹೆಚ್ಚಿವೆ.

ತಮಿಳುನಾಡಿನ ರಾಜಕೀಯ ಲೆಕ್ಕಾಚಾರಗಳು ಉಲ್ಟಾ ಆಗುವ ಸಾಧ್ಯತೆಗಳಿವೆ. ಏಕೆಂದ್ರೆ ತಮಿಳುನಾಡಲ್ಲಿ ರಜನಿಕಾಂತ್ ಅವರಿಗೆ ಆ ಕ್ರೇಜ್ ಇದೆ. ಆ ಫಾಲೋಯಿಂಗ್ ಇದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPRajini KanthS Gurumurty
ShareTweetSendShare
Join us on:

Related Posts

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

by Shwetha
July 9, 2025
0

Goa Shipyard Recruitment 2025: ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ (GSL) ದೇಶದ ಪ್ರಮುಖ ಶಿಪ್‌ಬಿಲ್ಡಿಂಗ್ ಪಿಎಸ್ಸುಗಳಲ್ಲಿ ಒಂದಾಗಿ ಭಾರತದ ನೌಕಾಪಡೆಯು ಮತ್ತು ಕೋಸ್ಟ್ ಗಾರ್ಡ್ ಗೆ ರಕ್ಷಣಾ...

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

ಹಸಿದ ಹೊಟ್ಟೆಗೆ ಅನ್ನ ನೀಡುವುದು ಸಹ ಅಭಿವೃದ್ಧಿಯ ಭಾಗ – ಗ್ಯಾರಂಟಿ ಯೋಜನೆಗಳ ಬಗ್ಗೆ ಸವದಿಯ ಪ್ರತಿಕ್ರಿಯೆ

by Shwetha
July 9, 2025
0

ಬಡ ಜನರ ಉದ್ಧಾರಕ್ಕಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ನಡುವೆ, ಈ ಯೋಜನೆಗಳ ಪರಿಣಾಮವಾಗಿ ಜನರಲ್ಲಿ ಜಡತ್ವ ಮೂಡುತ್ತಿದೆ ಎಂಬ...

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

by Shwetha
July 9, 2025
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 7 ಕೋಟಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಸದಸ್ಯರು ಈ ಬಾರಿ ಬಡ್ಡಿ ಹಣವನ್ನು ಸಮಯಕ್ಕೆ...

ಹಣ ಬಿಡುಗಡೆ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಮುಷ್ಕರ ಕೊನೆ – ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ

ಹಣ ಬಿಡುಗಡೆ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಮುಷ್ಕರ ಕೊನೆ – ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ

by Shwetha
July 9, 2025
0

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ವಿತರಣೆ ಸೇರಿದಂತೆ ವಿವಿಧ ಸರಕಾರದ ಸಾಗಣೆ ಕಾರ್ಯಗಳಿಗೆ ಲಾರಿಗಳ ಲಭ್ಯತೆ ಸಮಸ್ಯೆಯಾಗಿ ಪರಿಣಮಿಸಿತ್ತು. ಕಾರಣವೇನೆಂದರೆ, ಪಡಿತರ ವಸ್ತುಗಳ ಸಾಗಣೆಗೆ ಸರ್ಕಾರ...

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಸರ್ಕಾರದಿಂದ ಶೀಘ್ರ ಕಾಯಿದೆ ಜಾರಿ?

ಆನ್‌ಲೈನ್ ಬೆಟ್ಟಿಂಗ್‌ಗೆ ಕಡಿವಾಣ: ಕರ್ನಾಟಕ ಸರ್ಕಾರದಿಂದ ಶೀಘ್ರ ಕಾಯಿದೆ ಜಾರಿ?

by Shwetha
July 9, 2025
0

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಮುಂದಿನ ಅಧಿವೇಶನದಲ್ಲಿಯೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram