ಸ್ಯಾಂಡಲ್ ವುಡ್ ಗೆ ಮತ್ತೆ ಕಮ್ ಬ್ಯಾಕ್ ಮಾಡಿದ ರಾಮ್ ಕುಮಾರ್ ..!
ಒಂದು ಟೈಮ್ ನಲ್ಲಿ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹಿಟ್ ಸಿನಿಮಾಗಳಲ್ಲಿ ನಟಿಸಿ ಜನಮನಗೆದ್ದು ನಂತರ ಬಣ್ಣದ ಜಗತ್ತಿನಿಂದ ಮಾಯವಾಗಿ ಹೋಗಿದ್ದ ರಾಮ್ ಕುಮಾರ್ ಇದೀಗ ಮತ್ತೆ ಚಂದನವನಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.
‘ಶೀಘ್ರ ಮೇವ ಕಲ್ಯಾಣ ಪ್ರಾಪ್ತಿ ರಸ್ತು’ ಸಿನಿಮಾದ ಮೂಲಕ ಸ್ಯಾಂಡಲ್ವುಡ್ನಲ್ಲಿ ಮತ್ತೆ ಬಣ್ಣ ಹಚ್ಚಿದ್ದಾರೆ. ದಿಯಾ ಸಿನಿಮಾದ ನಟ ದೀಕ್ಷಿತ್ ಹೀರೋ ಆಗಿ ಮಿಂಚುತ್ತಿರುವ ಈ ಸಿನಿಮಾದಲ್ಲಿ ರಾಮ್ ಕುಮಾರ್ ಕೃಷ್ಣಮೂರ್ತಿ ಎನ್ನುವ ಪ್ರಾಧ್ಯಾಪಕರ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಈಗಾಗಲೇ ಚಿತ್ರೀಕರಣದಲ್ಲಿ ರಾಮ್ ಕುಮಾರ್ ಭಾಗಿಯಾಗಿದ್ದು, ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಸ್ನೇಹ ಲೋಕ, ಗೆಜ್ಜೆ ನಾದ, ಕಾವ್ಯ ದಂತಹ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಇದೀಗ ರಾಮ್ ಮತ್ತೊಮ್ಮೆ ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದದಾರೆ. ಈ ಚಿತ್ರಕ್ಕೆ ಚೆನ್ನಪ್ಪ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಅಂದ್ಹಾಗೆ ರಾಮ್ ಕುಮಾರ್ ಮಗಳಾದ ಧನ್ಯಾ ರಾಮ್ ಅವರ ಮೊದಲ ಸಿನಿಮಾದ ಶೂಟಿಂಗ್ ಸಹ ಬಹುತೇಕ ಕಂಪ್ಲೀಟ್ ಆಗಿದೆ. ನಿನ್ನ ಸನಿಹಕೆ ಕನ್ನಡದ ಸಿನಿಮಾ ಮೂಲಕ ಸಿನಿ ಜರ್ನಿ ಆರಂಭಿಸಿದ್ದಾರೆ.