ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆಯಬೇಕಿದ್ದ ಭೂಮಿಪೂಜೆ ಕಾರ್ಯಕ್ರಮವನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಈ ಹಿಂದೆ ಸಭೆ ಸೇರಿದ್ದ ಸಾಧು-ಸಂತರು ಏಪ್ರಿಲ್ 30 ರಂದು ಭೂಮಿ ಪೂಜೆ ಮಾಡಲು ತೀರ್ಮಾನ ಮಾಡಿದ್ದರು. ಏಪ್ರಿಲ್ 30 ರಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಕಾಮಗಾರಿ ಆರಂಭಿಸಲು ಉದ್ದೇಶಿಸಿ ಭೂಮಿಪೂಜೆ ಕಾರ್ಯಕ್ರಮವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿತ್ತು. ಆದರೆ ಕೊರೊನಾ ನಿಯಂತ್ರಣಕ್ಕಾಗಿ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಭೂಮಿ ಪೂಜೆ ಮಾಡಲು ಆಗುವುದಿಲ್ಲ. ಹಾಗಾಗಿ ಭೂಮಿ ಪೂಜೆಯನ್ನು ಮುಂದೂಡಲಾಗಿದೆ ಎಂದು ರಾಮ ಮಂದಿರ ನಿರ್ಮಾಣಕ್ಕಾಗಿ ರಚಿಸಲಾಗಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತನ್ನ ನಿರ್ಧಾರ ಪ್ರಕಟಿಸಿದೆ. ಅಲ್ಲದೆ ಭೂಮಿ ಪೂಜೆಯ ದಿನಾಂಕವನ್ನು ಕೊರೊನಾ ಮಹಾಮಾರಿಯಿಂದ ದೇಶ ಪರಾಗಿ, ದೇಶ ಸಹಜ ಸ್ಥಿತಿ ಬಂದ ಬಳಿಕ ನಿಗದಿ ಮಾಡಲಾಗುವುದು . ‘ಪಿಎಂ ಕೇರ್ಸ್’ ಗೆ 11 ಲಕ್ಷ ದೇಣಿಗೆ ನೀಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೇಳಿದೆ.
ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ
ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...








