ಎರೆಡೆರೆಡು ಬಾರಿ ಸೀಲ್ ಡೌನ್ ಆಗಿದ್ದ ರಾಮನಗರ ಕಾರಾಗೃಹ ಸತತ ೪ ತಿಂಗಳ ಬಳಿಕ ತೆರವುಗೊಂಡಿದೆ. ಕಳೆದ ೪ ತಿಂಗಳ ಹಿಂದೆ ಪಾದರಾಯನಪುರ ಪ್ರಕರಣದ ಆರೋಪಿಗಳನ್ನು ಕಾರಾಗೃಹಕ್ಕೆ ಕರೆತಂದ ಸಂದರ್ಭದಲ್ಲಿ ಜೈಲ್ ನ ವಾರ್ಡನ್ ಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾರಾಗೃಹವನ್ನು ೨ನೇ ಬಾರಿಗೆ ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಕಾರಾಗೃಹ ಸೀಲ್ ಡೌನ್ ಮುಕ್ತವಾಗಿದ್ದು, ಹೊಸದಾಗಿ ಐವರು ಆರೋಪಿಗಳನ್ನು ಕಂಬಿ ಹಿಂದೆ ಕಳುಹಿಸಲಾಗಿದೆ.
ಮಾರ್ಚ್ 22ರಂದು ಪಾದರಾಯನಪುರ ಗಲಭೆ ಪ್ರಕರಣದ 121 ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದರು. ಇದಾದ ಎರಡೇ ದಿನದಲ್ಲಿ ಅಲ್ಲಿದ್ದವರಲ್ಲಿ ಐವರಿಗೆ ಪಾಸಿಟಿವ್ ಕಾಣಿಸಿಕೊಂಡಿತ್ತು. ಬಳಿಕ ಮತ್ತೆ ವಾಪಸ್ ಬೆಂಗಳೂರಿಗೆ ಆರೋಪಿಗಳನ್ನು ಶಿಫ್ಟ್ ಮಾಡಲಾಗಿತ್ತು. ಅದಕ್ಕೂ ಮೊದಲು ರಾಮನಗರ ಜೈಲಿನಲ್ಲಿದ್ದ 177 ಮಂದಿ ವಿಚಾರಣಾಧೀನ ಖೈದಿಗಳು ಬೆಂಗಳೂರಿಗೆ ಶಿಫ್ಟ್ ಮಾಡಿದ್ದರು.
ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್
ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...








