ಈಜಲು ಹೋಗಿ ಬಾಲಕರಿಬ್ಬರು ನೀರು ಪಾಲು
ರಾಮನಗರ : ಕಟ್ಟೆಯಲ್ಲಿ ಈಜಲು ಹೋಗಿ ಬಾಲಕರಿಬ್ಬರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಬಿಡದಿಯ ಕೆಂಚನಕುಪ್ಪೆ ಬಳಿ ನಡೆದಿದೆ.
ಬಿಡದಿಯ ಸರ್ಕಾರಿ ಶಾಲೆಯ 5ನೇ ತರಗತಿ ಓದುತ್ತಿದ್ದ ಕೌಶಿಕ್ (12) ಮತ್ತು ಕರ್ಣ(11) ಎಂಬುವರು ಮೃತ ಬಾಲಕರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಕಟ್ಟೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು.
ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರೆ ತೆಗೆಸಿದ್ದಾರೆ. ಸದ್ಯ ಮೃತ ಬಾಲಕರ ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.