ಲಿಂಗಾಯತ ಸಮುದಾಯದವರನ್ನು ಸಿಎಂ ಮಾಡಿದ್ದು ಸಾಗತಾರ್ಹ : ರಂಭಾಪುರಿ ಶ್ರೀ
ಬೆಳಗಾವಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ರಂಭಾಪುರಿ ಪೀಠದ ಜಗದ್ಗುರುಗಳು ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪನವರ ಪದತ್ಯಾಗದಿಂದ ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದವರು ಬೇಸರದಲ್ಲಿದ್ದರು. ಅದನ್ನು ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನನ್ನು ಸಿಎಂ ಆಗಿ ನೇಮಕ ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಿದ್ದು ಸ್ವಾಗತಾರ್ಹ. ಮುಖ್ಯಮಂತ್ರಿ ರೇಸ್ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬಂದಿತ್ತು. ಆದ್ರೆ ಬಸವರಾಜ್ ಬೊಮ್ಮಾಯಿ ಅವರನ್ನ ಸರ್ವಾನುಮತದಿಂದ ಆಯ್ಕೆ ಮಾಡಿರೋದು, ಅವರ ಪಕ್ಷದ ಒಗ್ಗಟ್ಟು, ದೂರದೃಷ್ಟಿಗೆ ಸಾಕ್ಷಿಯಾಗಿದೆ.
ಬಸವರಾಜ್ ಬೊಮ್ಮಾಯಿ ಚಾಣಾಕ್ಷ್ಯ ರಾಜಕಾರಣಿ, ದಕ್ಷ ಆಡಳಿತಗಾರ, ಯಾವುದೇ ಆರೋಪಗಳಿಲ್ಲ. ಹೀಗಾಗಿ, ಬಿಜೆಪಿಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಹೋಗುವ ಸಾಮಥ್ರ್ಯವಿದೆ ಎಂದು ಹೇಳಿದರು.
ಇನ್ನು ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿತ್ತು. ಬೆಳಗಾವಿಯ ಸುವರ್ಣಸೌಧದಲ್ಲಿ ಎರಡು ವರ್ಷಗಳಿಂದ ಅಧಿವೇಶನ ಆಗಿಲ್ಲ. ರಾಜಧಾನಿ ಬೆಂಗಳೂರಿನ ಕಾರ್ಯಾಲಯಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಬೇಕು. ಇದರಿಂದ ಅಭಿವೃದ್ಧಿಗೆ ಶಕ್ತಿ ಬರುತ್ತದೆ. ಇದರ ಕಡೆ ಬೊಮ್ಮಾಯಿ ಹೆಚ್ಚಿನ ಲಕ್ಷ್ಯವಹಿಸಬೇಕು ಎಂದು ಶ್ರೀಗಳು ಇದೇ ವೇಳೆ ಮನವಿ ಮಾಡಿಕೊಂಡರು.