ಬೆಂಗಳೂರು: ಜೆಡಿಎಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ರುಜುವಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಅವರು ಪಕ್ಷ ತೊರೆದಿದ್ದಾರೆ. ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ತಿನ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆಯಲಿಲ್ಲ ಮತ್ತು ಇತರ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಬಾಬು ಅವರು ಬಿಡುಗಡೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಪ್ರವೇಶ ಬಯಸಿದ್ದ ರಮೇಶ್ ಬಾಬುಗೆ ಜೆಡಿಎಸ್ ಟಿಕೆಟ್ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಅವರು ಪಕ್ಷದ ವರಿಷ್ಠ ಹೆಚ್.ಡಿ ದೇವೆಗೌಡರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.
Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ
ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...








