ನಾನು ಗಂಡಸು.. ಯಾರಿಗೂ ಹೆದರಲ್ಲ ಎನ್ನುತ್ತಾ ಮಹಾನಾಯಕನ ಹೆಸರು ಬಹಿರಂಗ ಪಡಿಸಿದ ಜಾರಕಿಹೊಳಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮಗಳ ಮುಂದೆ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ನೇರವಾಗಿ ಆರೋಪ ಮಾಡುವ ಮೂಲಕ ಮಹಾನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾರಕಿಹೊಳಿ, ನಾನು ಯಾರಿಗೂ ಹೆದರಲ್ಲ.. ನಾನು ಗಂಡಸು.. ಡಿಕೆಶಿ ವಿರುದ್ಧ ದೂರು ಕೊಡುತ್ತೇನೆ. ಅವನಿಗೆ ಯಾಕೆ ಹೆದರಬೇಕು? ಮುಂದಿನ ಚುನಾವಣೆಯಲ್ಲಿ ಕನಕಪುರದಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ. ಅವನನ್ನು ಅವನ ಕ್ಷೇತ್ರದಲ್ಲಿಯೇ ಸೋಲಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.
ಮಹಾನಾಯಕ ನರೇಶ್ ಗೌಡ ಜೊತೆ ಸಂಪರ್ಕ ಇಟ್ಟುಕೊಂಡಿದ್ದು, ಆತ ರಾಜಕಾರಣಕ್ಕೆ ನಾಲಾಯಕ್. ನನ್ನ ಬಳಿ ಹನ್ನೊಂದು ಸಾಕ್ಷಿಗಳಿದ್ದು ಅದನ್ನು ಎಸ್ಐಟಿಗೆ ನೀಡುತ್ತೇನೆ. ಡಿಕೆಶಿ ವಿರುದ್ಧ ಇವತ್ತೇ ದೂರು ಕೊಡುತ್ತೇನೆ. ಎಸ್ ಐಟಿಗೆ ನೇರವಾಗಿ ದೂರು ಕೊಡುತ್ತೇನೆ. ಕೇಸ್ ನಲ್ಲಿ ಯಾರೆಲ್ಲ ಇದ್ದಾರೆಂದು ತನಿಖೆಯಿಂದ ತಿಳಿಯಲಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗ ಪಡಿಸಿದ ಯುವತಿಯ ಪೋಷಕರಿಗೆ ಜಾರಕಿಹೊಳಿ ಧನ್ಯವಾದ ಹೇಳಿದ್ದಾರೆ.