ಸಿಡಿ ಪ್ರರಕಣ : ಕೊನೆಗೂ ದೂರು ದಾಖಲಿಸಿದ ಸಾಹುಕಾರ್..!! Ramesh jarakiholi
ಬೆಂಗಳೂರು : ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಬೆಂಬಲಿಗರ ಮೂಲಕ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆದ್ರೆ ದೂರಿನಲ್ಲಿ ಯಾವುದೇ ಹೆಸರನ್ನ ಅವರು ಉಲ್ಲೇಖಿಸಿಲ್ಲ ಅಂತ ತಿಳಿದುಬಂದಿದೆ.
ಕೇವಲ ಬ್ಲಾಕ್ ಮೇಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಿಸಲಾಗಿದ್ದು, ಇದು ನಾಲ್ಕು ತಿಂಗಳ ಷಡ್ಯಂತ್ರ ಅಂತ ಉಲ್ಲೇಖಿಸಿಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೀಡಿದ ದೂರನ್ನು ಆಧರಿಸಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಳ್ಳಲಿದ್ದು, ಈ ಮೂಲಕ ಸಿಡಿ ಪ್ರಕರಣದ ತನಿಖೆಗೆ ಸ್ಫೋಟಕ ಟ್ವಿಸ್ಟ್ ಸಿಗಲಿದೆ.
ಇತ್ತ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ, ಈಗಾಗಲೇ ಕೆಲವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದೆ.