ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂಬ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದರು.
ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...








