ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ : ರಮೇಶ್ ಜಾರಕಿಹೊಳಿ
ಗೋಕಾಕ್ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸಿಡಿ ಕೇಸ್ ವಿಚಾರವಾಗಿ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು.
ಈ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಭಾರಿ ಚರ್ಚೆ ನಡೆದಿತ್ತು. ಅಲ್ಲದೆ ಈ ವಿಚಾರವಾಗಿ ಕೆಲವೇ ದಿನಗಳಲ್ಲಿ ಒಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದರು.
ಇದೀಗ ಈ ವಿಚಾರವಾಗಿ ಗೋಕಾಕ್ ನಲ್ಲಿ ಮಾತನಾಡಿರುವ ರಮೇಶ್ ಜಾರಕಿಹೊಳಿ, ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ.
ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದ್ರೆ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ್ದಾರೆ. ಹಿರಿಯರ ಸಲಹೆ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಕೆ ಆರ್ ಎಸ್ ಬಿರುಕಿನ ಬಗ್ಗೆ ಎಚ್ ಡಿಕೆ ಹಾಗೂ ಸಮಲತಾ ನಡುವೆ ಟಾಕ್ ವಾರ್ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾರು ಏನ್ ಮಾತನಾಡಿದ್ದಾರೆ ಜಾಸ್ತಿ ಮಾಹಿತಿ ಇಲ್ಲ.
ಎಂಡಿ ಅವರು ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಎಂಡಿ ಹೇಳುವುದು ಫೈನಲ್. ಸುಮಲತಾ ಯಾಕೆ ಹೀಗೆ ಹೇಳಿದ್ರು ಅಂತ ನನಗೆ ಗೊತ್ತಿಲ್ಲ ಎಂದರು.