ರಮೇಶ್ ಜಾರಕಿಹೊಳಿ ಬ್ಲಾಕ್ ಮೇಲ್ ಕೇಸ್ : ಆರೋಪಿಗಳಿಗೆ ಜಾಮೀನು Ramesh Zarakiholi
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಲಾಕ್ ಮೇಲ್ ಕೇಸ್ಗೆ ಸಂಬಂಧಿಸಿದ ಇಬ್ಬರು ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಸಿಟಿ ಸಿವಿಲ್ ಕೋರ್ಟ್ ಇಂದು ಪ್ರಕರಣದ ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಇದರೊಂದಿಗೆ ಈ ಇಬ್ಬರು ಆರೋಪಿಗಳು ಬಂಧನದಿಂದ ಬಚಾವ್ ಆಗಿದ್ದಾರೆ.
ಸಿಡಿ ಕೇಸ್ ಹಿನ್ನೆಲೆ ರಮೇಶ್ ಜಾರಕಿಹೊಳಿ ಸದಾಶಿವನಗರ ಪೆÇಲೀಸ್ ಠಾಣೆಯಲ್ಲಿ ಈ ಇಬ್ಬರ ಮೇಲೆ ಬ್ಲ್ಯಾಲ್ ಮೇಲ್ ಕೇಸ್ ದಾಖಲು ಮಾಡಿದ್ರು.
ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಆಕ್ಷೇಪಣೆ ಸಲ್ಲಿಸಿತ್ತು.
ಆದ್ರೆ ಎಸ್ ಐಟಿ ವಾದಕ್ಕೆ ಇದೀಗ ಹಿನ್ನೆಡೆಯಾಗಿದ್ದು, ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜೊತೆಗೆ ನ್ಯಾಯಾಲಯ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.