ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎಗೆ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸ್ಫೋಟಕ್ಕೂ ಮುನ್ನ 2 ತಿಂಗಳು ತಮಿಳುನಾಡಿನಲ್ಲಿದ್ದ ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್ಐಎಗೆ ಅದನ್ನು ತಮಿಳುನಾಡಿನ ಮಾಲ್ ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ಸಿಕ್ಕಿದೆ. ಟೊಪ್ಪಿ ಖರೀದಿ ಸಂದರ್ಭದಲ್ಲಿ ಶಂಕಿತನ ಜೊತೆಗೆ ಮತ್ತೋರ್ವ ವ್ಯಕ್ತಿ ಇರುವುದು ಮಾಲ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ.
ಪತ್ತೆಯಾದ ಕ್ಯಾಪ್ ನಲ್ಲಿ ಶಂಕಿತನ ಕೂದಲು ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ಡಿಎನ್ ಎ ಟೆಸ್ಟ್ ಗೆ ನೀಡಿದ್ದಾರೆ. ಅಲ್ಲದೇ, ತನಿಖೆ ಸಂದರ್ಭದಲ್ಲಿ ಆತ ಕರ್ನಾಟಕ ಮೂಲದವನು ಎನ್ನಲಾಗಿದೆ. ಶಿವಮೊಗ್ಗೆ ಜಿಲ್ಲೆಯ ಮುಸಾವೀರ್ ಮತ್ತು ಹುಸೇನ್ ಶಬೀದ್ ಎಂಬ ಕುರಿತು ಸುಳಿವು ದೊರೆತಿದೆ. ಇವರು ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಉಳಿದುಕೊಂಡಿರುವುದು ಕೂಡ ಪತ್ತೆಯಾಗಿದೆ. ಹೀಗಾಗಿ ಸದ್ಯ ಎನ್ ಐಎ ತನಿಖೆ ಚುರುಕುಗೊಳಿಸಿದೆ.