Ramnagar ವೈದ್ಯೋ ನಾರಾಯಣೋ ಹರಿ ಎಂದು ಹೇಳುತ್ತಾರೆ ಆದರ ವೈದ್ಯರು ಅತಿಯಾಸೆಗೆ ಮಾಡಿ ರೋಗಿಯ ಬಳಿ ಲಂಚಕ್ಕೆ ಕೈ ಚಾಚುವುದು ಅಮಾನವಿಯ ಕೃತ್ಯವಾಗಿದೆ ಇದಕ್ಕೆ ಸಾಕ್ಷಿಯಂತೆ ರಾಮನಗರ ಸಮೀಪ ಬಿಡದಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯೆಯರು ಬಾಣಂತಿಯ ಡಿಸ್ಚಾರ್ಜ್ಗೆ ಲಂಚದ ಬೇಡಿಕೆಯಿಟ್ಟಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಇದ್ದು ಇಲ್ಲಿ ವೈದ್ಯರು ರೋಗಿಗಳಿಂದ ಹಣ ಕಬಳಿಸುತ್ತಿದ್ದಾರೆ.
ಸರಕಾರಿ ಆಸ್ಪತ್ರೇಗೆ ತೆರಳುವ ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಬದಲು ವೈದ್ಯರಿಂದ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ ಆಸ್ಪತ್ರೆಗೆ ದಾಖಲಾಗುವ ರೋಗಿ ಹಣ ನೀಡಲೇಬೇಕು, ಅದು ಅವರು ಕೇಳಿದಷ್ಟು ಲಂಚ ಕೊಡಲೇಬೇಕಂತೆ. ಬಿಡದಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿತ್ಯ ಇದೇ ರೀತಿಯ ಕರ್ಮಕಾಂಡ ನಡೆಯುತ್ತಿದೆ.
ಡಾ. ಶಶಿಕಲಾ ಮತ್ತು ಡಾ. ಐಶ್ವರ್ಯ ರೋಗಿಯ ಪಾಲಕರಿಂದ ಹಣ ಲಂಚ ಪಡೆಯುತ್ತಿದ್ದಾರೆ . ಈ ವೀಡಿಯೋ ಈಗ ಸಖತ್ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.
ಬಿಡದಿಯ ನಿಂಗೇಗೌಡನ ದೊಡ್ಡಿಯ ಮಂಜಪ್ಪ ಅವರು ಅವರ ಪತ್ನಿಯನ್ನು ಗೆ ದಾಖಲಿಸಿದ್ದರು. ಚಿಕಿತ್ಸೆಗೆ ಹಣದ ಬೇಡಿಕೆ ಇಟ್ಟಿದ್ದ ವೈದ್ಯರಿಗೆ ಎರಡು ಸಾವಿರ ಹಣ ನೀಡಲು ಹೋಗಿದ್ದಾರೆ.
ಆಗ ವೈದ್ಯರು ಕೊಟ್ಟಷ್ಟು ಹಣವನ್ನು ಒಪ್ಪಿಕೊಳ್ಳದೇ ಸತಾಯಿಸಿದ್ದರು. ಮೇಲಿನ ವೈದ್ಯರಿಗೆ ಎರಡು ಸಾವಿರ ರೂ. ನನಗೆ ಎರಡು ಸಾವಿರ ರೂ. ಮತ್ತೊಬ್ಬ ವೈದ್ಯರಿಗೆ ಎರಡು ಸಾವಿರ ರೂ. ಹಂಚಬೇಕು ಎಂದು ಡಾ ಶಶಿಕಲಾ ಹೇಳಿದ್ದು ಪೋನಲ್ಲಿ ಸೇರೆ ಯಾಗಿದೆ .
ಮತ್ತೊಬ್ಬ ವೈದ್ಯೆ ಡಾ. ಐಶ್ವರ್ಯ. ನಿಮ್ಮೊಬ್ಬರ ಬಳಿ ಎರಡು ಸಾವಿರ ರೂ. ಪಡೆದುಕೊಂಡ್ರೆ ವಾರ್ಡ್ನಲ್ಲಿ ದಾಖಲಾಗಿರುವ ಎಲ್ಲರೂ ಹಾಗೆ ಮಾಡ್ತಾರೆ ಎಂದು ಹೇಳಿದ್ದಾರೆ.
ಇನ್ನೂ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗುತ್ತಿಲೇ ಎಚ್ಚೆತ್ತ ಜಿಲ್ಲಾ ಆರೋಗ್ಯಾಧಿಕಾರಿ ಕಾಂತರಾಜು ಅವರು ಇಬ್ಬರು ವೈದ್ಯ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದನ್ನ ಗಮನಿ ಬಳಿಕ ವೀಡಿಯೋ ಸಂಪೂರ್ಣವಾಗಿ ಪರಿಶೀಲಿಸಿ ಇಬ್ಬರನ್ನು ಅಮಾನತು ಮಾಡಿ ತನಿಖೆಗೆ ಒಳಪಡಿಸಿದ್ದೇವೆ ಎಂದು ಹೇಳಿದ್ದಾರೆ.