Ramulu | ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಚ್ಚರಿ ಹೇಳಿಕೆಗೆ ಕೊಟ್ಟ ರಾಮುಲು
ಯಾದಗಿರಿ : ಮುಂದೆ ನಾನು ರಾಜಕಾರಣದಲ್ಲಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ, ನಮ್ಮ ಸಮುದಾಯವನ್ನು ಮುನ್ನಡೆಸುವ ಶಕ್ತಿ ರಾಜೂ ಗೌಡರಿಗೆ ಇದೆ ಎಂದು ಸಚಿವ ಶ್ರೀರಾಮುಲು ಭಾವುಕರಾಗಿದ್ದಾರೆ.
ಹುಣಸಗಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ರಾಜೂಗೌಡ ಅವರನ್ನು ಹಾಡಿ ಹೊಗಳಿದ್ದು ಮಾತ್ರವಲ್ಲದೇ ಎಲ್ಲರೂ ರಾಜೂಗೌಡ ಅವರನ್ನೂ ಬೆಂಬಲಿಸುವಂತೆ ಮನವಿ ಮಾಡಿಕೊಂಡರು.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ರಾಜ್ಯದ ಸಂಕಲ್ಪ ಮಾಡಿ ಇಲ್ಲಿಗೆ ಬಂದಿದ್ದಾರೆ. ಕಲ್ಯಾಣ ಕರ್ನಾಟಕ ಆಗಬೇಕು.

ರಾಜೂ ಗೌಡ ಸೇರಿ 150 ಸ್ಥಾನ ಗೆಲ್ಲಬೇಕು, ರಾಜೂ ಗೌಡ ನಮ್ಮ ಸಮುದಾಯದ ಭವಿಷ್ಯದ ನಾಯಕರು ಎಂದು ಹೇಳಿದ್ರು.
ಇನ್ನು ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಗುಡುಗಿದ ರಾಮುಲು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಪಕ್ಷವನ್ನು ಬೇರು ಸಹಿತ ಕಿತ್ತು ಹಾಕಬೇಕು.
ಬೊಮ್ಮಾಯಿಯವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕು. ಬಹಳ ಮಂದಿ ಸಿಎಂ ಆಗಬೇಕು ಅಂತಾ ತಿರುಕನ ಕನಸು ಕಾಣುತ್ತಿದ್ದಾರೆ ಅಂತಾ ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.








