ಪ್ರತಿ ದಿನವೂ ಅಪ್ಪು ಅವರನ್ನು ಆರಾಧಿಸೋಣ – ರಮ್ಯಾ
ಬೆಂಗಳೂರು : ಪುನೀತ್ ರಾಜ್ ಕುಮಾರ್ ನಿಧನದ ನಂತರ ಸಿನಿಮಾರಂಗ , ಅಭಿಮಾನಿಗಳು ದುಃಖದಲ್ಲಿದ್ದಾರೆ. ಇಡೀ ಕರುನಾಡನಲ್ಲಿ ಒಂದು ರೀತಿ ಶೋಕದ ವಾತಾವರಣವಿದೆ. ಅಭಿಮಾನಿಗಳು ಕ್ರೂರ ವಿಧಿಗೆ ಶಾಪ ಹಾಕ್ತಾಯಿದ್ದಾರೆ. ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಅಂತಿಮ ಕಾರ್ಯ ನೆರವೇರಿತು.
ಈ ನಡುವೆ ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ನಾವು ಅವರಿಗೆ ಸಲ್ಲಿಸಬಹುದಾದ ಅತ್ಯುತ್ತಮ ಗೌರವವೆಂದರೆ ಅವರು ತೋರಿಸುತ್ತಿದ್ದ ದಯೆ. ಅಪ್ಪು ಜೊತೆಯಲ್ಲಿ ನಾನು ಕಳೆದ ಬಹಳಷ್ಟು ನೆನಪುಗಳು ಅತ್ಯಮೂಲ್ಯ. ನಿಮ್ಮನ್ನು ನಾವು ಎಂದೆಂದಿಗೂ ನೆನೆಯುತ್ತೇವೆ.
ಈ ಕಷ್ಟದ ಸಮಯದಲ್ಲಿ ಭಗವಂತ ಅಶ್ವಿನಿ ಮತ್ತು ಕುಟುಂಬಕ್ಕೆ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮನ್ನು ಅಗಲಿರುವ ಇಂತ ಉನ್ನತ ವ್ಯಕ್ತಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ನಾನು ಅವರ ಅಭಿಮಾನಿಗಳ ಜೊತೆ ಇರುವೆನು ಎಂದು ಧೈರ್ಯ ತುಂಬಿದ್ದಾರೆ.
ಅಪ್ಪು ಅವರ ಬಗ್ಗೆ ಹಲವರು ಬರೆದ ಎಲ್ಲ ಭಾವನಾತ್ಮಕ ಸಂದೇಶಗಳನ್ನು ಓದುತ್ತಿದ್ದೇನೆ ಮತ್ತು ಅವೆಲ್ಲವೂ ಅಕ್ಷರಸಹ ನಿಜ. ಕೆಲವಂತು ನನ್ನ ಕಣ್ಣಲ್ಲಿ ನೀರು ತಂದಿತು. ಅದೇ ಪುನೀತ್. ಹೌದು, ಅವರೇ ಅಪ್ಪು. ಇವುಗಳನ್ನು ಓದಿದಾಗ ನನ್ನಲ್ಲಿ ಮೂಡಿದ ಕೆಲವು ಆಲೋಚನೆಗಳು ಇವು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.