ಕೊರೊನಾ ಸಂಕಷ್ಟ : 400 ಬುಡಕಟ್ಟು ಕುಟುಂಬಗಳ ನೆರವಿಗೆ ಧಾವಿಸಿದ ‘ಬಾಹುಬಲಿ ಬಲ್ಲಾಳದೇವ’
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಬಾಹುಬಲಿ ಸಿನಿಮಾ ಖ್ಯಾತಿಯ ರಾಣಾ ದಗ್ಗುಬಾಟಿ ಲಾಕ್ ಡೌನ್ ಸಂದರ್ಭದಲ್ಲಿ ಬುಡಕಟ್ಟು ಕುಟುಂಬಗಳ ನೆರವಿಗೆ ಧಾವಿಸಿದ್ದಾರೆ. 400 ಬುಡಕಟ್ಟು ಕುಟುಂಬಗಳಿಗೆ ರಾಣಾ ದಗ್ಗುಬಾಟಿ ಉಚಿತವಾಗಿ ದಿನಸಿ ಮತ್ತು ಔಷಧಗಳನ್ನು ವಿತರಿಸಿದ್ದಾರೆ.
ಬುಡಕಟ್ಟು ಜನರು ಹೆಚ್ಚಾಗಿ ವಾಸಿಸುವ ನಿರ್ಮಲ್ ಜಿಲ್ಲೆಯ ಪಾಲ ರೇಗಡಿ, ಅಡ್ಡಾಲ ತಿಮ್ಮಾಪುರ, ಕಾಹಿರ ತಾಂಡಾ, ಗಗನ್ಪೇಟ್ ಇನ್ನೂ ಹಲವಾರು ಹಳ್ಳಿಗಳಿಗೆ ರಾಣಾ ದಗ್ಗುಬಾಟಿ ತಂಡವು ಉಚಿತ ದಿನಸಿ, ಔಷಧಗಳನ್ನು ವಿತರಿಸಿದೆ.
ರಾಣಾ ದಗ್ಗುಬಾಟಿ ಇತ್ತೀಚೆಗಷ್ಟೆ ಸಿನಿಮಾವೊಂದರಲ್ಲಿ ಬುಡಕಟ್ಟು ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ‘ ‘ಅರಣ್ಯ’ ಸಿನಿಮಾದಲ್ಲಿ ರಾಣಾ ದಗ್ಗುಬಾಟಿ ಆನೆಗಳಿಗಾಗಿ ಹಾಗೂ ಬುಡಕಟ್ಟು ಜನರಿಗಾಗಿ ಹೋರಾಡುವ ಪಾತ್ರದಲ್ಲಿ ನಟಿಸಿದ್ದಾರೆ. ಹಾಗಾಗಿಯೇ ರಾಣಾ ಬುಡಕಟ್ಟು ಜನರಿಗಾಗಿ ಈ ಸೇವಾಕಾರ್ಯ ಮಾಡಿದ್ದಾರೆ.
ಇನ್ನೂ ರಾಣಾ ದಗ್ಗುಬಾಟಿ ನಟಿಸಿರುವ ‘ವಿರಾಟ ಪರ್ವಂ’ ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಪ್ರಸ್ತುತ ಪವನ್ ಕಲ್ಯಾಣ್ ಜೊತೆಗೆ ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಸಿನಿಮಾದ ರೀಮೇಕ್ನಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ಹಿಂದಿಯ ‘ಭುಜ್’ ಸಿನಿಮಾದಲ್ಲಿಯೂ ರಾಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.