ನಟ ರಣಬೀರ್ ಕಪೂರ್ ರಾಮನಾಗಲು ತರಬೇತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ರಾಮಯಾಣ (Ramayana) ಸಿನಿಮಾದಲ್ಲಿ ಅವರು, ರಾಮನ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕಾಗಿ ಹಲವಾರು ರೀತಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಭಾಗದ ನಟರಿಗೆ ಹೆಚ್ಚಿನ ಪ್ರಶಸ್ತ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ, ಯಶ್ ಮಾತ್ರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಧು ಮಾಂಟೇನ್ ಅವರು ಕೂಡ ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಹೇಳಿದ್ದು ಕೂಡ, ಯಶ್ ಅಭಿನಯಿಸುದು ಪಕ್ಕಾ ಎನ್ನಲಾಗುತ್ತಿದೆ.
ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್ (Ranbir Kapoor) ನಿರ್ವಹಿಸಲಿದ್ದಾರೆ. ಸೀತೆಯಾಗಿ ಸಾಯಿ (Sai Pallavi) ಅವರೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ.