ಮಂಡ್ಯ: ಫುಟ್ಪಾತ್ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೂ ಕಾಮುಕರ ಅಟ್ಟಹಾಸ ಮೆರೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ಬಾಟಾ ಶೋರೂಂ ಬಳಿ ಭಿಕ್ಷುಕಿಯ ಮೇಲೆ ಅತ್ಯಾಚಾರ ಎಸಗಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುರುಳರು ಪರಾರಿಯಾಗಿದ್ದಾರೆ.
ಶೋರೂಂ ಎದುರಿನ ಫುಟ್ಪಾತ್ನಲ್ಲಿ ಭಿಕ್ಷುಕಿ ಹಗಲು ಭಿಕ್ಷೆ ಬೇಡಿ ರಾತ್ರಿ ಮಲಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಕಾಮುಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟಕ್ಕೂ ಸುಮ್ಮನಾಗದೆ ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








