ಮಂಡ್ಯ: ಫುಟ್ಪಾತ್ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೂ ಕಾಮುಕರ ಅಟ್ಟಹಾಸ ಮೆರೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ಬಾಟಾ ಶೋರೂಂ ಬಳಿ ಭಿಕ್ಷುಕಿಯ ಮೇಲೆ ಅತ್ಯಾಚಾರ ಎಸಗಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುರುಳರು ಪರಾರಿಯಾಗಿದ್ದಾರೆ.
ಶೋರೂಂ ಎದುರಿನ ಫುಟ್ಪಾತ್ನಲ್ಲಿ ಭಿಕ್ಷುಕಿ ಹಗಲು ಭಿಕ್ಷೆ ಬೇಡಿ ರಾತ್ರಿ ಮಲಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಕಾಮುಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟಕ್ಕೂ ಸುಮ್ಮನಾಗದೆ ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!
ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್ನಲ್ಲಿ ಹೆಸರಿರುವ...








