ಕಂಗನಾ ಗನ್ ಮ್ಯಾನ್ ವಿರುದ್ಧ ಅತ್ಯಾಚಾರ ಆರೋಪ – ಕರ್ನಾಟಕದಲ್ಲಿ ತಲೆಮರೆಸಿಕೊಂಡಿರುವ ಶಂಕೆ
ಮುಂಬೈ: ಬಾಲಿವುಡ್ ನ ಕಾಂಟ್ರವರ್ಸಿ ಕ್ವೀನ್ ಕಂಗನಾ ರಣಾವತ್ ಗನ್ ಮ್ಯಾನ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಮುಂಬೈಯ ಮೇಕಪ್ ಕಲಾವಿದೆಯೊಬ್ಬರು ತಮ್ಮ ಮೇಲೆ ಅತ್ಯಾಚಾರವೆಸಗಿರುವುದಾಗಿ ಕಂಗನಾ ಗನ್ ಮ್ಯಾನ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆ ಎಂದು ಹೇಳಿಕೊಂಡಿರುವ ಮಹಿಳೆ ತನ್ನನ್ನ ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ 50 ಸಾವಿರ ರೂಪಾಯಿಗಳನ್ನ ಪಡೆದು ವಂಚಿಸಿದ್ದಾನೆ ಎಂದು ಆರೋಪ ಮಾಡಿದ್ದಾರೆ.
ಡಿಎನ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆದ್ರೆ ಕೇಸ್ ದಾಖಲಾಗ್ತಿದ್ದಂತೆ ಕುಮಾರ್ ತಲೆಮರೆಸಿಕೊಂಡಿದ್ದಾನೆ.. ಆತ ಕರ್ನಾಟಕದಲ್ಲಿ ಅವಿತು ಕುಳಿತಿರುವ ಶಂಕೆ ವ್ಯಕ್ತವಾಗಿದೆ.
8 ವರ್ಷಗಳ ಹಿಂದೆ ಕುಮಾರ್ ಸಂತ್ರಸ್ತೆಯ ಜೊತೆ ಸಂಪರ್ಕಕ್ಕೆ ಬಂದಿದ್ದು, ಕಳೆದ ವರ್ಷದ ಜೂನ್ನಲ್ಲಿ ಮದುವೆಯಾಗುತ್ತೇನೆ ಎಂದು ನಂಬಿಸಿ ತನ್ನ ಪ್ರೇಮ ಪ್ರಸ್ತಾವನೆ ಮಾಡಿದ್ದನಂತೆ. ಇದಾದ ಬಳಿಕ ಸಂತ್ರಸ್ತೆಯ ಫ್ಲ್ಯಾಟ್ಗೆ ಬಂದು ಹಲವು ಬಾರಿ ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಏ.27ಕ್ಕೆ ನಾನು ಆತನಿಗೆ ಹಣವನ್ನು ನೀಡಿದ್ದೆ. ಬಳಿಕ ಆತ ಕರ್ನಾಟಕಕ್ಕೆ ಓಡಿ ಹೋಗಿದ್ದಾನೆ. ಈ ವೇಳೆ ನಾನು ಆತನ ತಾಯಿಗೆ ಕರೆ ಮಾಡಿದಾಗ ಆತ ಬೇರೆಯವರನ್ನು ಮದುವೆಯಾಗುತ್ತಿರುವ ವಿಚಾರ ತಿಳಿಯಿತು. ಆತನ ತಾಯಿ ಸಹ ನನ್ನನ್ನೇ ದೂಷಿಸಿದ್ದಾರೆ. ಮಗನಿಂದ ನೀನು ದೂರ ಇರು ಎಂದು ಧಮ್ಕಿ ಹಾಕಿದ್ದಾರೆಂದು ಆರೋಪಿಸಿದ್ದಾರೆ. ಮುಂಬೈ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ, ವಂಚನೆ ಸೇರಿ ಹಲವು ಸೆಕ್ಷನ್ ನ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.