ಕಣ್ಣೂರು: ಫಿಜಿಯೋಥೆರಪಿ ಸಂದರ್ಭದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದೆ.
ಕೇರಳದ ಪಯ್ಯನೂರು ಬಸ್ ನಿಲ್ದಾಣದ ಹತ್ತಿರ ಈ ಘಟನೆ ನಡೆದಿದೆ. ಈ ಕರಿತು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ 42 ವರ್ಷದ ಶರತ್ ನಂಬಿಯಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಮ್ನ ಮಾಲೀಕ ಶರತ್ ಚಿಕಿತ್ಸಾ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಸ್ವತಃ ಫಿಸಿಯೋಥೆರಪಿಸ್ಟ್ ಅಲ್ಲದಿದ್ದರೂ, ಮಹಿಳೆಯರಿಗೆ ತಾನೇ ಫಿಸಿಯೋಥೆರಪಿ ಮಾಡುತ್ತೇನೆ ಎಂದು ಆತ ಮುಂದೆ ಹೋಗುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಆರೋಪಿ ಬಂಧಿಸಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಕಸ್ಟಡಿಗೆ ನೀಡಲಾಗಿದೆ ಎಂದು ಮಾತೃಭೂಮಿ ವರದಿ ಮಾಡಿದೆ. ಈ ಮಧ್ಯೆ ಅರೆಸ್ಟ್ ಆಗಿರುವ ವ್ಯಕ್ತಿಗಳ ಗುಂಪು ಮಂಗಳವಾರ ಮಧ್ಯಾಹ್ನ ಶರತ್ ಅವರ ಕ್ಲಿನಿಕ್ ಆವರಣದ ಮೇಲೆ ದಾಳಿ ಮಾಡಿ, ಉಪಕರಣಗಳನ್ನು ಧ್ವಂಸಗೊಳಿಸಿತು. ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ ನಂತರ ಹಿಂಸಾಚಾರ ಸಂಭವಿಸಿದೆ ಎಂದು ತಿಳಿದು ಬಂದಿದೆ.