ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಾನು ಕಲ್ಲಾಗಿದ್ದೀನಿ… ಟ್ರೋಲ್ ಗಳಿಗೆ ತಲೆ ಕಡೆಸಿಕೊಳ್ಳಲ್ಲ – ರಷ್ಮಿಕಾ

Namratha Rao by Namratha Rao
August 7, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ನಾನು ಕಲ್ಲಾಗಿದ್ದೀನಿ… ಟ್ರೋಲ್ ಗಳಿಗೆ ತಲೆ ಕಡೆಸಿಕೊಳ್ಳಲ್ಲ – ರಷ್ಮಿಕಾ

ಸ್ಯಾಂಡಲ್ ವುಡ್ ನ ಕಿರಿಕ್ ಪಾರ್ಟಿ ಮೂಲಕ ನ್ಯಾಷನಲ್ ಕ್ರಷ್ ಆದ ಚಷ್ಮಾ ಸುಂದರಿ ಟಾಲಿವುಡ್ , ಕಾಲಿವುಡ್ , ಈಗ ಬಾಲಿವುಡ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ.. ಒನ್ ಆಫ್ ದ ಬ್ಯುಸಿಯೆಸ್ಟ್ ನಟಿಯರಲ್ಲಿ ರಶ್ಮಿಕಾ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ..

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಸದ್ಯ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ನಟಿಸುತ್ತಿದ್ದಾರೆ. ಕೊರೊನಾ 2ನೇ ಅಲೆ ಮುಗಿಯುತ್ತಿದ್ದಂತೆ ರಶ್ಮಿಕಾ ಮತ್ತೆ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಬಾಲಿವುಡ್ ಸಿನಿಮಾ ಚಿತ್ರೀಕರಣಕ್ಕಾಗಿ ಮುಂಬೈನಲ್ಲೇ ಬೀಡುಬಿಟ್ಟಿದ್ದಾರೆ. ಮುಂಬೈನಲ್ಲಿ ಹೊಸ ಮನೆಯನ್ನು ಖರೀದಿ ಮಾಡಿದ್ದಾರೆ.

ಸಾಲು ಸಾಲು ಸಿನಿಮಾಗಳಲ್ಲಿ ಮಿಂಚುತ್ತಿರುವ ರಷ್ಮಕಾಗೆ ಅಪಾರ ಅಭಿಮಾನಿಗಳಿದ್ದಾರೆ.. ಆದ್ರೆ ಅದಕ್ಕಿಂತ ಒಂದು ಪಟ್ಟು ಹೆಚ್ಚು ಹೇಟರ್ಸ್ ಇದ್ದಾರೆ.. ಟ್ರೋಲಿಗರೇ ಇದ್ದಾರೆ ಅಂದ್ರೆ ತಪ್ಪಾಗಲಾರದು.. ಅದಕ್ಕೆ ಮುಖ್ಯ ಕಾರಣ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕ್ ಅಪ್.. ಅದ್ರಲ್ಲೂ ಬ್ರೇಕ್ ಅಪ್ ಆಗಿದ್ದ ಟೈಮ್ ನಲ್ಲಂತೂ ರಷ್ಮಿಕಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಯಾವ ಟ್ರೋಲ್ ಪೇಜ್ ನೋಡಿದ್ರೂ ಅಲ್ಲೆಲ್ಲಾ ರಷ್ಮಿಕಾ ಅವರದ್ದೇ ಸುದ್ದಿಯಾಗಿಬಿಟ್ಟಿತ್ತು.

ಕಿರಿಕ್ ಪಾರ್ಟಿ ಸೂಪರ್ ಹಿಟ್ ಆದ ಬಳಿಕ ರಷ್ಮಿಕಾ ನಸೀಬ್ ಬದಲಾಗಿಬಿಟ್ಟಿತ್ತು.. ಪರ ಬಾಷೆಗಳಿಂದ ಆಫರ್ ಗಳ ಸುರಿಮಳೆಯೇ ಬಂದಿತ್ತು.. ಬಳಿಕ ಟಾಲಿವುಡ್ ಗೆ ಕಾಲಿಟ್ಟ ರಶ್ಮಿಕಾ ಮೊದಲ ಸಿನಿಮಾದಲ್ಲೇ ತೆಲುಗು ಪ್ರೇಕ್ಷಕರ ಮನಗೆದ್ದರು. ಅಷ್ಟರಲ್ಲೇ ರಶ್ಮಿಕಾ ನಟ ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದರು. ಅದ್ದೂರಿಯಾಗಿ ರಕ್ಷಿತ್ ಜೊತೆ ಎಂಗೇಜ್ ಆಗುತ್ತಿದ್ದಂತೆ ತೆಲುಗು ಕಡೆ ಮುಖಮಾಡಿದರು. ತೆಲುಗಿನಲ್ಲಿ ನಟ ವಿಜಯ್ ದೇವರಕೊಂಡ ಜೊತೆ ಗೀತಾ ಗೋವಿಂದಂ ಸಿನಿಮಾದಲ್ಲಿ ಕಾಣಿಸಿಕೊಂಡ ರಶ್ಮಿಕಾ ಸಿಕ್ಕಾಪಟ್ಟೆ ಸುದ್ದಿಯಾದರು. ವಿಜಯ್ ಜೊತೆ ಕಿಸ್ಸಿಂಗ್ ದೃಶ್ಯದಲ್ಲಿ ನಟಿಸಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ರಶ್ಮಿಕಾ ಬಗ್ಗೆ ಕನ್ನಡಾಭಿಮಾನಿಗಳು , ರಕ್ಷಿತ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು.. ಆಗ್ಲಿಂದಲೇ ಅನೇಕ ಗೊಂದಲಗಳು ಶುರುವಾಗಿತ್ತು..

ಅದೆ ಸಮಯದಲ್ಲಿ ನಟ ರಕ್ಷಿತ್ ಶೆಟ್ಟಿ ಜೊತೆ ಬ್ರೇಕಪ್ ಕೂಡ ಮಾಡಿಕೊಂಡರು. ರಕ್ಷಿತ್ ಅವರಿಂದ  ದೂರ ಆಗುತ್ತಿದ್ದಂತೆ ರಶ್ಮಿಕಾ ಸಿಕ್ಕಾಪಟ್ಟೆ ಟ್ರೋಲ್ ಗೆ ಗುರಿಯಾದರು. ಸಾಮಾಜಿಕ ಜಾಲತಾಣಗಳಲ್ಲಿ ರಶ್ಮಿಕಾರನ್ನು ಹಿಗ್ಗಾಮುಗ್ಗ ಟ್ರೋಲ್ ಮಾಡಲಾಯಿತು. ರಶ್ಮಿಕಾ ಏನೆ ಮಾಡಿದರು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದರು. ಯಾವುದೇ ಪೋಸ್ಟ್ ಶೇರ್ ಮಾಡಿದರೂ ಕೆಟ್ಟದಾಗಿ ಕಾಮೆಂಟ್ ಮಾಡಿ ರಶ್ಮಿಕಾ ಕಾಲೆಳೆಯುತ್ತಿದ್ದರು. ಈಗ ಮೊದಲಿನಷ್ಟು ಇಲ್ಲ ಅಂದ್ರೂ ರಷ್ಮಿಕಾರನ್ನ ನೆಟ್ಟಿಗರು ಟ್ರೋಲ್ ಮಾಡೋದನ್ನ ಮಾತ್ರ ಬಿಟ್ಟಿಲ್ಲ.

ಇತ್ತೀಚೆಗೆ ರಷ್ಮಿಕಾ ಟ್ರೋಲ್ ಗಳನ್ನು ಎದುರಿಸಿದ ರೀತಿಯ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ನಿರ್ಮಾಪಕಿ ಅನುಪಮಾ ಚೋಪ್ರಾಗೆ ನೀಡಿದ ಸಂದರ್ಶನದಲ್ಲಿ ರಶ್ಮಿಕಾ ಬ್ರೇಕಪ್ ಬಳಿಕ ನಿಭಾಯಿಸಿದ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಪ್ರಾರಂಭದಲ್ಲಿ ಇದು ತುಂಬಾ ಕಷ್ಟವಾಗಿತ್ತು. ನಮ್ಮ ಕುಟುಂಬ ಸಿನಿಮಾ ಬ್ಯಾಕ್ ಗ್ರೌಂಡ್ ನಿಂದ ಬಂದಿದ್ದಲ್ಲ. ಯಾರಿಗೂ ಕೂಡ ಸಿನಿಮಾಗೆ ಸಂಬಂಧ ಇರಲಿಲ್ಲ. ನನಗೆ ಎಲ್ಲವೂ ಹೊಸದಾಗಿತ್ತು. ಜನರು ನನ್ನನು ಟ್ರೋಲ್ ಮಾಡುತ್ತಿದ್ದರು, ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದರು. ತುಂಬಾ ಗಂಭೀರವಾಗಿ ಪರಿಗಣಿಸುತ್ತಿದ್ದೆ. ತುಂಬಾ ಉಸಿರುಗಟ್ಟಿಸುವ ವಾತಾವರಣವಾಗಿತ್ತು ಎಂದಿದ್ದಾರೆ.

ಜನರು ನಿಮ್ಮ ಬಾಡಿ, ಬಣ್ಣ, ಸಂಬಂಧ ಸೇರಿದಂತೆ ಎಲ್ಲದರ ಬಗ್ಗೆಯೂ ಮಾತನಾಡುತ್ತಾರೆ. ಆಗ ನನಗೆ ಇದು ತುಂಬಾ ಕಷ್ಟವಾಗಿತ್ತು. ಕೆಲವು ಬಾರಿ ನನಗೆ ತುಂಬಾ ನೋವಾಗಿತ್ತು. ಕೆಲಸದ ಬಗ್ಗೆ ಕಾಮೆಂಟ್ ಮಾಡಿ. ಆದರೆ ನನ್ನ ಬಾಲ್ಯದ ಫೋಟೋ, ನನ್ನ ಕುಟುಂಬದ ಬಗ್ಗೆ ಕಾಮೆಂಟ್ ಮಾಡುವುದು ಹೇಳಿದ್ದಾರೆ.

19ನೇ ವಯಸ್ಸಿನಲ್ಲೇ ನನಗೆ ಟ್ರೋಲ್ ಕಾಟ ಶುರುವಾಗಿತ್ತು. ಆದರೆ ಈಗ ನಾನು ಕಲ್ಲಾಗಿದ್ದೇನೆ. ಈಗ ನನಗೆ ಟ್ರೋಲ್ ಯಾವುದೇ ಮ್ಯಾಟರ್ ಆಗಲ್ಲ. ಈಗ ತುಂಬಾ ಹಗುರವಾಗಿ ತೆಗೆದುಕೊಳ್ಳುತ್ತೇನೆ. ಟ್ರೋಲ್ ನೋಡಿದರೆ ಹಾ..ಹಾ.. ಎಂದು ನಗುತ್ತೇನೆ ಅಷ್ಟೆ. ಓ ದೇವರೆ ಹಾಗಿಯಿತು, ಹೀಗಾಯಿತು ಅಂತ ಎಲ್ಲಾ ಸ್ಟಾರ್ಸ್ ಗೂ ಅನುಭವವಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಜನ ಎಲ್ಲಾ ಕಡೆಯಿಂದ ಪಂಚ್ ಮಾಡುತ್ತಲ್ಲೇ ಇದ್ದಾಗ ಮಾಡಿ ಎಂದು ಸುಮ್ಮನಾಗುವುದು ಅಷ್ಟೆ. ನೀವು ನನಗೆ ಏನು ಕೊಟ್ಟರೂ ತೆಗೆದುಕೊಳ್ಳುತ್ತೇನೆ. ಜನರು ನನ್ನ ಬಗ್ಗೆ ಒಳ್ಳೆಯಮಾತುಗಳನ್ನು ಆಡಿದ್ದಾರೆ. ತನ್ನ ಕೆಲಸವನ್ನು ಇಷ್ಟಪಟ್ಟಿದ್ದಾರೆ. ಎಲ್ಲಾ ಕಡೆ ಕೆಟ್ಟದ್ದು ಮತ್ತು ಒಳ್ಳೆಯದ್ದು ಎರಡು ಇರುತ್ತದೆ. ಜನರು ನನ್ನನ್ನು ಸಾನ್ವಿ ಎನ್ನುತ್ತಾರೆ, ಲಿಲ್ಲಿ ಎನ್ನುತ್ತಾರೆ, ಗೀತಾ ಎಂದು ಕರೆಯುತ್ತಾರೆ ಇದು ತುಂಬಾ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಸದ್ಯ ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾದಲ್ಲಿ ರಷ್ಮಿಕಾ ನಾಯಕಿಯಾಗಿದ್ದು, ಈ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ..  ಬಾಲಿವುಡ್ ನಲ್ಲಿ ಮಿಷನ್ ಮಜ್ನು ಮತ್ತು ಗುಡ್ ಬೈ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ನಾನು ಶೂಟಿಂಗ್ ಗೆ ಹೋದ್ರೆ … ಪೋಷಕರು ಭಯ ಪಡ್ತಾರೆ – ರಶ್ಮಿಕಾ

 

 

Tags: #saakshatvRakshith Shettyrashmika mandannaSandalwoodTollywoodtroll
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram