ಮಂತ್ರಾಲಯದ ಶ್ರೀಗುರು ಶ್ರೀರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ವೈಭವದಿಂದ ನಡೆಯಲಿದೆ ಎಂದು ಪೀಠಾಧಿಪತಿ ಶ್ರೀಸುಭುಧೇಂದ್ರ ತೀರ್ಥರು ಹೇಳಿದ್ದಾರೆ.
ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. 29ರಿಂದ ಸೆ. 4ರ ವರೆಗೆ 7 ದಿನ ಮಹೋತ್ಸವ ನಡೆಯಲಿದೆ ಎಂದು ಹೇಳಿದ್ದಾರೆ. 7 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಸಮಾರಂಬಘಳು ನಡೆಯಲಿವೆ. ಗ್ರಂಥಗಳ ಲೋಕಾರ್ಪಣೆ ಹಾಗೂ ವಿವಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಲಗುವುದು. ಆ. 29ರಂದು ಧ್ವಜಾರೋಹಣ, ಗೋ, ಧಾನ್ಯ, ಲಕ್ಷ್ಮೀ ಪೂಜೆ ಮೂಲಕ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.
ಆ. 31ರಂದು ಪೂರ್ವಾರಾಧನೆಯ ಅಂಗವಾಗಿ ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ಮೂಲ ರಾಮದೇವರ ಪೂಜೆ ನಡೆಯಲಿದೆ. ಸಂಜೆ ಮಠದ ಮುಂಭಾಗದ ಯೋಗೀಂದ್ರ ಸಭಾ ಮಂಟಪದಲ್ಲಿ ಕರ್ನಾಟಕದ ವಿದ್ವಾನ್ ರಾಮ ವಿಠ್ಠಲಾಚಾರ್ಯ ಅವರು ಸೇರಿದಂತೆ ಹಲವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ