ಕೋವಿಡ್ ವಾರಿಯರ್ಸ್ ಗಾಗಿ ಜರ್ಸಿ ಬದಲಿಸಿದ ಆರ್ ಸಿಬಿ
ಕಳೆದ ಬಾರಿ ಕೊರೊನಾ ವಾರಿಯರ್ಸ್ಗಾಗಿ ಆಡಿ ಅಭಿಮಾನಿಗಳ ಮನಗೆದ್ದಿದ್ದ ಆರ್ ಸಿಬಿ, ಈಗ ಜರ್ಸಿ ಬದಲಿಸಿದೆ.
ಕೊರೊನಾ ಮುನ್ನೆಚ್ಚರಿಕಾ ಕ್ರಮ ಮತ್ತು ಕೊರೊನಾ ವಾರಿಯರ್ಸ್ ಗಾಗಿ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಲೂ ಜರ್ಸಿಯಲ್ಲಿ ಕಣಕ್ಕೆ ಇಳಿಯಲಿದೆ.
ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮ್ಯಾನೆಜ್ ಮೆಂಟ್ ಪ್ರಕಟಣೆ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರ್ ಸಿಬಿ ‘ಬೆಂಗಳೂರು ಮತ್ತು ಇತರ ನಗರಗಳಲ್ಲಿ ಆಕ್ಸಿಜನ್ ಬೆಂಬಲಕ್ಕೆ ಸಂಬಂಧಿಸಿದ ಆರೋಗ್ಯ ಮೂಲಸೌಕರ್ಯದಲ್ಲಿ ತಕ್ಷಣವೇ ಹೆಚ್ಚಿನ ಸಹಾಯ ಅಗತ್ಯವಿರುವ ಪ್ರಮುಖ ಕ್ಷೇತ್ರಗಳನ್ನು ಆರ್ ಸಿಬಿ ಗುರುತಿಸಿದೆ ಮತ್ತು ಈ ನಿಟ್ಟಿನಲ್ಲಿ ಆರ್ಥಿಕ ಕೊಡುಗೆ ಯನ್ನು ನೀಡುತ್ತದೆ’ ಎಂದು ಆರ್ ಸಿಬಿಯ ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಕೊಹ್ಲಿ ಹೇಳಿದ್ದಾರೆ.
ಈ ಹಿಂದೆ ಗೋ ಗ್ರೀನ್ ಅಭಿಯಾನಕ್ಕೆ ಬೆಂಬಲ ಸೂಚಿಸಿ ಆರ್ ಸಿಬಿ ಗ್ರೀನ್ ಜರ್ಸಿಯಲ್ಲಿ ಕಣಕ್ಕೆ ಇಳಿಯುತ್ತಿತ್ತು.
ಇದೀಗ ಕೊರೊನಾ ಸಂಕಷ್ಟದಲ್ಲಿ ಕೊರೊನಾ ವಾರಿಯರ್ಸ್ಗೆ ಬೆಂಬಲ ಸೂಚಿಸುವ ಸಲುವಾಗಿ ಬ್ಲೂ ಜರ್ಸಿ ತೊಟ್ಟು ಮೈದಾನಕ್ಕೆ ಇಳಿಯಲಿದೆ.
ಸದ್ಯದ ಐಪಿಎಲ್ ನಲ್ಲಿ ಆರ್ ಸಿಬಿ ಉತ್ತಮ ಪ್ರದರ್ಶನ ತೋರಿದ್ದು, ಆಡಿದ ಏಳು ಪಂದ್ಯಗಳಲ್ಲಿ 5 ಪಂದ್ಯಗಳನ್ನ ಗೆದ್ದಿದೆ.