ಈ ಭಾನುವಾರ, ನನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಹೊರ ಹೋಗುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು ಅದಕ್ಕೆ ಟ್ವೀಟಿಗರು ಸಾಮಾಜಿಕ ಜಾಲತಾಣದಿಂದ ಹೊರನಡೆಯದಿರಿ ಎಂದು ರೀಟ್ವೀಟ್ ಮಾಡುವ ಮೂಲಕ ವಿನಂತಿಸಿದ್ದಾರೆ.
ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪಿಎಂ ಮೋದಿಯವರ ಟ್ವೀಟ್ಗೆ ಪ್ರತಿಕ್ರಿಯಿಸಿ, “ನರೇಂದ್ರ ಮೋದಿಜೀ – ದಯವಿಟ್ಟು ಮರುಪರಿಶೀಲಿಸಿ!” ಎಂದು ರೀಟ್ವೀಟ್ ಮಾಡಿದ್ದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ‘ಸಾಮಾಜಿಕ ಜಾಲತಾಣದ ಖಾತೆಗಳನ್ನು ಅಲ್ಲ, ದ್ವೇಷವನ್ನು ಬಿಟ್ಟುಬಿಡಿ’ ಎಂದು ಮೋದಿಯವರ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಿ ಮೋದಿಯವರ ಘೋಷಣೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಗೌರವ್ ಭಾಟಿಯಾ ಕೂಡ ಟ್ವೀಟ್ ಮಾಡಿದ್ದು ‘ ಪ್ರಧಾನಿ ಮೋದಿಯವರ ಈ ನಿರ್ಧಾರ ಸಾಮಾಜಿಕ ಮಾಧ್ಯಮ ಜಗತ್ತಿಗೆ ಮತ್ತು ಸಾಮಾನ್ಯ ಜನರಿಗೆ ಬಹಳ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ರಾಷ್ಟ್ರ ನಿರ್ಮಾಣಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಬಹಳ ಪರಿಣಾಮಕಾರಿಯಾಗಿ ಬಳಸಿದ ಒಬ್ಬ ವ್ಯಕ್ತಿ ಇದ್ದರೆ, ಅದು ನರೇಂದ್ರ ಮೋದಿಜೀ ಮತ್ತು ಅವರ ಒಳನೋಟವುಳ್ಳ, ದೂರದೃಷ್ಟಿಯ ಸಂದೇಶಗಳಿಗಾಗಿ ಜಗತ್ತು ಅವರನ್ನು ಮೆಚ್ಚುತ್ತದೆ ಎಂದು ಅವರು ಟ್ವಿಟರ್ ನಲ್ಲಿ ಬರೆದಿದ್ದಾರೆ.
ಈ ಭಾನುವಾರ, ನನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಹೊರ ಹೋಗುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು ಅದಕ್ಕೆ ಟ್ವೀಟಿಗರು ಸಾಮಾಜಿಕ ಜಾಲತಾಣದಿಂದ ಹೊರನಡೆಯದಿರಿ ಎಂದು ರೀಟ್ವೀಟ್ ಮಾಡುವ ಮೂಲಕ ವಿನಂತಿಸಿದ್ದಾರೆ.
ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪಿಎಂ ಮೋದಿಯವರ ಟ್ವೀಟ್ಗೆ ಪ್ರತಿಕ್ರಿಯಿಸಿ, “ನರೇಂದ್ರ ಮೋದಿಜೀ – ದಯವಿಟ್ಟು ಮರುಪರಿಶೀಲಿಸಿ!” ಎಂದು ರೀಟ್ವೀಟ್ ಮಾಡಿದ್ದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ‘ಸಾಮಾಜಿಕ ಜಾಲತಾಣದ ಖಾತೆಗಳನ್ನು ಅಲ್ಲ, ದ್ವೇಷವನ್ನು ಬಿಟ್ಟುಬಿಡಿ’ ಎಂದು ಮೋದಿಯವರ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಿ ಮೋದಿಯವರ ಘೋಷಣೆಯ ಬಗ್ಗೆ ಬಿಜೆಪಿ ಮುಖಂಡ ಗೌರವ್ ಭಾಟಿಯಾ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿಯವರ ಈ ನಿರ್ಧಾರ ಸಾಮಾಜಿಕ ಮಾಧ್ಯಮ ಜಗತ್ತಿಗೆ ಮತ್ತು ಸಾಮಾನ್ಯ ಜನರಿಗೆ ಬಹಳ ದೊಡ್ಡ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ರಾಷ್ಟ್ರ ನಿರ್ಮಾಣಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಬಹಳ ಪರಿಣಾಮಕಾರಿಯಾಗಿ ಬಳಸಿದ ಒಬ್ಬ ವ್ಯಕ್ತಿ ಇದ್ದರೆ, ಅದು ನರೇಂದ್ರ ಮೋದಿಜೀ ಮತ್ತು ಅವರ ಒಳನೋಟವುಳ್ಳ, ದೂರದೃಷ್ಟಿಯ ಸಂದೇಶಗಳಿಗಾಗಿ ಜಗತ್ತು ಅವರನ್ನು ಮೆಚ್ಚುತ್ತದೆ ಎಂದು ಅವರು ಟ್ವಿಟರ್ ನಲ್ಲಿ ಬರೆದಿದ್ದಾರೆ.