ಭಾರತದಲ್ಲಿ ಕಳೆದ 24 ಗಂಟಗಳಲ್ಲಿ 2,71,202 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 314 ಮಂದಿ ಹೆಮ್ಮಾರಿ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ. 1,38,331 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟು 15,50,377 ಸಕ್ರಿಯ ಪ್ರಕರಣಗಳು ಇವೆ.
ದೇಶದಲ್ಲಿ ಕೊರೊನಾವನ್ನು ನಿಯಂತ್ರಿಸಲು, ಕೊರೊನಾ ಲಸಿಕೆ ಪ್ರಾರಂಭಿಸಲಾಗಿತ್ತು. ಕೊರೊನಾ ಲಸಿಕೆ ಪ್ರಾರಂಭಿಸಿ ಒಂದು ವರ್ಷ ಪೂರೈಸಿದೆ. ಹೀಗಾಗಿ #1YearOfVaccineDrive ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವಿಟ್ವ್ ಮಾಡಿದ್ದಾರೆ. ಕೇಂದ್ರ ಸರಕಾರ 2021 ಜನವರಿ 2 ರಂದು ಲಸಿಕೆಯನ್ನು ತುರ್ತಾಗಿ ಉಪಯೋಗಿಸಲು ಅನುಮತಿ ನೀಡಿತ್ತು. ನಂತರ ಜನವರಿ 16 ರಂದು ದೇಶಾದ್ಯಂತ ಲಸಿಕೆ ನೀಡಲು ಪ್ರಾರಂಭ ಮಾಡಲಾಗಿತ್ತು.
ಸಿಲಿಕಾನ್ ಸಿಟಿಯಲ್ಲಿ ಜನರಿಗೊಂದು ಕಾನೂನು, ರಾಜಕಾರಣಿಗಳಿಗೊಂದು ಕಾನೂನು ಎಂಬಂತಾಗಿದೆ. ಕೊರೊನಾ ಆತಂಕ, ನಿಯಮಗಳನ್ನು ಗಾಳಿಗೆ ತೂರಿ ಜನವರಿ 14 ರಂದು ಬಿಜೆಪಿ ನಾಯಕ ಎನ್ ಆರ್ ರಮೇಶ್ ಭರ್ಜರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ. ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಗಮಿಸಿದ್ದ ಸಿಬ್ಬಂದಿ ಈ ಕಂದಮ್ಮಗಳಿಗೆ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಅಸ್ವಸ್ಥಗೊಂಡಿದ್ದ ಕಂದಮ್ಮಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿವೆ.
ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂಗೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜನರು ಬೇಕಾಬಿಟ್ಟಿ ಓಡಾಡಿದ್ರೆ, ಕೆಲವು ಜಿಲ್ಲೆಗಳಲ್ಲಿ ಕರ್ಪ್ಯೂ ನಿಯಮ ಪಾಲಿಸುತ್ತಿದ್ದಾರೆ. ಹುಬ್ಬಳ್ಳಿಯ ಪ್ರಸಿದ್ಧ ಮೀನು ಮಾರುಕಟ್ಟೆ ಜನರಿಲ್ಲದೆ ಗೊಣಗೂಡುತ್ತಿದೆ. ವಿಜಯಪುರದಲ್ಲಿ ಮಾಸ್ಕ್ ಇಲ್ಲದೇ ಜನರು ಮಾರ್ಕೆಟ್ ಗೆ ಮುಗಿಬಿದ್ದಿದ್ದರು.
ಪೆಸಿಫಿಕ್ ಸಾಗರದಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡು ಬೃಹತ್ ಅಲೆಗಳು ಎದ್ದ ಪರಿಣಾಮ ಪೆಸಿಫಿಕ್ ದ್ವೀಪ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಟೊಂಗಾ ನ್ಯೂಜಿಲೆಂಡ್ ಹಾಗೂ ಅಮೆರಿಕಾದ ಕೆಲವು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದೊಳಗಿನ ಜ್ವಾಲಾಮುಖಿ ಸ್ಫೋಟದಿಂದ ಉಂಟಾದ ಬೃಹತ್ ಅಲೆಗಳು ಟೊಂಗಾಗೆ ಅಪ್ಪಳಿಸಿದ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಾಲಿವುಡ್ ನಿಂದ ಪುಷ್ಪ ಸಿನಿಮಾ ನಿರ್ದೇಶಕ ಸುಕುಮಾರ್ ಗೆ ಬಂಫರ್ ಆಫರ್ ಸಿಕ್ಕಿದೆಯಂತೆ.. ಬಾಲಿವುಡ್ ನ ಕಿಲಾಡಿ ಅಕ್ಷಯ್ ಕುಮಾರ್ ಗೆ ಸುಕುಮಾರ್ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗ್ತಿದೆ. ಪುಷ್ಪ ಸಿನಿಮಾ ನೋಡಿರುವ ಅಕ್ಷಯ್ ಕುಮಾರ್ ಸುಕುಮಾರ್ ಅವರಿಗೆ ಕರೆ ಮಾಡಿ ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರಂತೆ.. ಅಷ್ಟೇ ಅಲ್ಲದೇ ಇದೇ ಸಮಯದಲ್ಲಿ ಇಬ್ಬರು ಜೊತೆಯಾಗಿ ಸಿನಿಮಾ ಮಾಡುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.
ಕಳೆದ ವರ್ಷ ಬಾಲಿವುಡ್ ನ ಸ್ಟಾರ್ ಅಮೀರ್ ಖಾನ್ ಪತ್ನಿ ಕಿರಣ್ ರಾವ್ ಅವರ ಜೊತೆಗೆ ಡಿವೋರ್ಸ್ ಪಡೆದುಕೊಂಡಿದ್ದಾರೆ.. ಈ ಜೋಡಿ ಮದುವೆಯಾದ ಒಟ್ಟು 15 ವರ್ಷಗಳ ಬಳಿಕ ಬೇರೆಯಾಗಿದ್ದಾರೆ. ಆದ್ರೆ ಡಿವೋರ್ಸ್ ನಂತರವೂ ಈ ಜೋಡಿ ಆಗಾಗ ಒಟ್ಟಿಗೆ ಕಾಣಿಸಿಕೊಳ್ತಾ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಇದೀಗ ಹೊಸ ವಿಚಾರ ಏನಂದರೇ ಕಿರಣ್ ರಾವ್ ನಿರ್ದೇಶನದಲ್ಲಿ ಅಮೀರ್ ನಟಿಸಲಿದ್ದಾರಂತೆ.
ಟೀಂ ಇಂಡಿಯಾ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳಿದ ವಿರಾಟ್ ಕೊಹ್ಲಿ ನಿರ್ಧಾರದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ. ಭಾರತ ತಂಡವನ್ನು ಎಲ್ಲಾ ಫಾರ್ಮೆಟ್ಗಳಲ್ಲಿ ಮುಂಚೂಣಿಯಲ್ಲಿರಿಸುವಲ್ಲಿ ವಿರಾಟ್ ಪ್ರಮುಖ ಪಾತ್ರ ವಹಿಸಿದ್ದಾರೆ. ನಾಯಕತ್ವದಿಂದ ಕೆಳಗಿಳಿಯುವುದು ಅವರ ವೈಯಕ್ತಿಕ ನಿರ್ಧಾರವಾಗಿದ್ದು, ಬಿಸಿಸಿಐ ಅದನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ.
ಟೆಸ್ಟ್ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ, ಪ್ರತಿಕ್ರಿಯೆ ನೀಡಿದ್ದು, ಅಚ್ಚರಿ ವ್ಯಕ್ತಪಡಿಸಿದ್ದಾರೆ. “ನನಗೆ ಆಘಾತವಾಗಿದೆ !! ಭಾರತ ತಂಡದ ನಾಯಕರಾಗಿ ನಿಮ್ಮ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ” ಎಂದು ಕೊಹ್ಲಿ ಜೊತೆಗಿನ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.










