ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯ : ಆರ್.ಅಶೋಕ್
ಬೆಂಗಳೂರು : ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ್, ರಾಜ್ಯದಲ್ಲಿ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ.
ಇದನ್ನ ಹರಡದೇ ತಡೆಯಲು ರಾಜ್ಯದಲ್ಲಿ ರಿಯಲ್ ನೈಟ್ ಕರ್ಫ್ಯೂ ಅಗತ್ಯವಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಬ್ರಿಟನ್ ವೈರಸ್ | ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ವಿಸ್ತರಣೆ
ಇದಲ್ಲದೆ ರಾಜ್ಯದಾದ್ಯಂತ ಮತ್ತಷ್ಟು ಬಿಗಿ ಕ್ರಮಜಾರಿಗೆ ಸಿಎಂ ಜೊತೆ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.
ಇದೇ ವೇಳೆ ಲಾಕ್ ಡೌನ್ ಜಾರಿ ಬಗ್ಗೆ ಮಾತನಾಡಿ, ಸದ್ಯಕ್ಕೆ ಲಾಕ್ ಡೌನ್ ಅವಶ್ಯಕತೆ ಇಲ್ಲ. ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ.
ಕೊರೊನಾ ಹೆಚ್ಚು ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಬೇಕಾ? ಬೇಡ್ವಾ? ಎಂಬುದನ್ನು ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









