ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್ ಚಂದ್ರವರ್ಮ ಮಾಹಿತಿ ನೀಡಿದ್ದಾರೆ.
ಸೋಮವಾರ ಓಂ ಬಿರ್ಲಾ ಅವರನ್ನು ಭೇಟಿಯಾಗಿ ತಮ್ಮ ಬಣವನ್ನು ಅಧಿಕೃತವಾಗಿ ಗುರುತಿಸುವಂತೆ ಮನವಿ ಮಾಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. ತಮ್ಮ ಬಣಕ್ಕೆ 19 ಸಂಸದರ ಬೆಂಬಲವಿದ್ದು, ತಾವೇ ನಿಜವಾದ ಟಿಎಂಸಿ ಎಂದು ಪರಿಗಣಿಸಬೇಕು ಎಂಬ ವಾದವನ್ನು ಸ್ಪೀಕರ್ ಮುಂದೆ ಮಂಡಿಸಲಿದ್ದೇವೆ ಎಂದಿದ್ದಾರೆ.
ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ 58 ಬಂಡಾಯ ಶಾಸಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಂಡು ವಿರೋಧ ಪಕ್ಷದ ಸ್ಥಾನಮಾನ ಪಡೆದಿರುವುದು ಈ ಬೆಳವಣಿಗೆಗೆ ಮತ್ತಷ್ಟು ಮಹತ್ವ ತಂದಿದೆ. ಈಗ ಸಂಸತ್ತಿನಲ್ಲಿಯೂ ಬಂಡಾಯ ಗುಂಪು ಅಧಿಕೃತ ಮಾನ್ಯತೆ ಪಡೆಯಲು ಮುಂದಾಗಿರುವುದು ಟಿಎಂಸಿ ಒಳಗಿನ ಭಿನ್ನಾಭಿಪ್ರಾಯಗಳನ್ನು ಮತ್ತಷ್ಟು ಬಹಿರಂಗಗೊಳಿಸಿದೆ.
ಬಂಡಾಯ ಸಂಸದರ ಈ ನಡೆ ರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸ್ಪೀಕರ್ ಕಚೇರಿ ಈ ಮನವಿಯ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.







