ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇತಿಹಾಸ ಎಂದೂ ಮರೆಯದ ಕ್ರಾಂತಿಕಾರಿ ಯೋಧ ಶಾಹೀದ್ ಮಂಗಲ್ ಪಾಂಡೆಯ ನೆನಪಿಸಿಕೊಂಡು:

admin by admin
August 15, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಇತಿಹಾಸ ಎಂದೂ ಮರೆಯದ ಕ್ರಾಂತಿಕಾರಿ ಯೋಧ ಶಾಹೀದ್ ಮಂಗಲ್ ಪಾಂಡೆಯ ನೆನಪಿಸಿಕೊಂಡು:

ಭಾರತ ಇಂದು ಅಸಂಖ್ಯಾತ ಹೋರಾಟ, ಅಪರಿಮಿತ ತ್ಯಾಗ ಬಲಿದಾನಗಳ ಪರಿಣಾಮವಾಗಿ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಬಲಿದಾನಗಳು, ಹೋರಾಟಗಳು ನಡೆದಿವೆ. ಪ್ರತಿ ಹೋರಾಟವು ಒಂದೊಂದು ಘಟನೆಗಳಿಗೆ ಸಾಕ್ಷಿಯಾಗಿವೆ.

Related posts

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

August 28, 2026
ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

August 28, 2026

ಅನೇಕ ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ಹೋರಾಡಿ ತಮ್ಮ ಪ್ರಾಣ ತ್ಯಾಗಗೈದಿದ್ದಾರೆ. ಅವರಲ್ಲಿ ಒಬ್ಬ ಹುತಾತ್ಮ ಯೋಧ ಮಂಗಲ್ ಪಾಂಡೆ.
ಭಾರತದ ಸ್ವಾತಂತ್ರ್ಯ ಹೋರಾಟದ ಮೊದಲ ಸಂಗ್ರಾಮವೆಂದು 1857 ನೇ ಸಿಪಾಯಿದಂಗೆಯನ್ನು ಪರಿಗಣಿಸಲಾಗುತ್ತದೆ. ಇದು ಬ್ರಿಟೀಷರ ವಿರುದ್ಧ ಮೊದಲ ಬಾರಿಗೆ ದೇಶದಾದ್ಯಂತ ಹೋರಾಡಲು ಪ್ರೇರಣೆಯಾಯಿತು.

ವ್ಯಾಪಾರಕ್ಕಾಗಿ ಈಸ್ಟ್ ಇಂಡಿಯಾ ಕಂಪನಿಯ ಹೆಸರಿನಲ್ಲಿ ಭಾರತಕ್ಕೆ ಬಂದಿದ್ದ ಬ್ರಿಟೀಷರು 1857ರ ವೇಳೆಗೆ ಭಾರತವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದರು. 1857ರ ಮೊದಲ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹುತಾತ್ಮರಾಗಿ ಮಂಗಲ್ ಪಾಂಡೆಯ ಹೆಸರು ಭಾರತೀಯ ಇತಿಹಾಸದಲ್ಲಿ ಅಜರಾಮರವಾಗಿದೆ.
ಅವರು ಶಾಹೀದ್ ಮಂಗಲ್ ಪಾಂಡೆ ಎಂಬ ಹೆಸರಿನಿಂದ ಜನಮಾನಸದಲ್ಲಿ ನೆಲೆಸಿದ್ದಾರೆ.

ಮಂಗಲ್ ಪಾಂಡೆ ಜುಲೈ 19, 1827ರಂದು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ನಾಗ್ವಾ ಗ್ರಾಮದಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು.
ಮಂಗಲ್ ಪಾಂಡೆ ತನ್ನ 22 ನೇ ವರ್ಷದಲ್ಲಿ ಬ್ರಿಟಿಷ್ ಮಿಲಿಟರಿ ಕಂಟೋನ್ಮೆಂಟ್‌ನಲ್ಲಿ 34 ನೇ ಬಂಗಾಳ ಸ್ಥಳೀಯ ಕಾಲಾಳುಪಡೆಯ 1446 ಕಾಲಾಳುಪಡೆ ಸೈನಿಕರಾಗಿ ಸೇರಿದರು. ಮಂಗಲ್ ಪಾಂಡೆ ಒಬ್ಬ ನಿಜವಾದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಮತ್ತು ಭಾರತೀಯ ಸ್ವಾತಂತ್ರ್ಯದ ಮೊದಲ ಹೋರಾಟಕ್ಕೆ ಕಿಡಿ ಹಚ್ಚಿದರು. ಬ್ರಿಟಿಷ್ ಸೈನ್ಯದಲ್ಲಿ
ಮೇ 10, 1857ರಂದು ಭಾರತೀಯ ಸೈನಿಕರು ಸಾಮೂಹಿಕ ದಂಗೆ ಏಳಲು ಮಂಗಲ್ ಪಾಂಡೆ ಕಾರಣಿಕರ್ತರಾದರು. ಇದನ್ನು ಬ್ರಿಟಿಷರು ಸಿಪಾಯಿ ದಂಗೆ -1857 ಎಂದು ಕರೆದರು.

1853 ಎನ್‌ಫೀಲ್ಡ್ ರೈಫಲ್ಡ್ ಮಸ್ಕೆಟ್ ಬಂದೂಕಿಗೆ ಹೊಸ ಗುಂಡನ್ನು ಲೋಡ್ ಮಾಡಲು ಸೈನಿಕರು ಕ್ಯಾಟ್ರಿಡ್ಜ್ ಅನ್ನು ಬಾಯಿಯಿಂದ ಕಚ್ಚಿ ತೆರೆದು ಗನ್‌ಪೌಡರ್ ಅನ್ನು ಸುರಿಯಬೇಕಾಗಿತ್ತು. ಇದು ಸಿಪಾಯಿ ದಂಗೆಗೆ ಮುಖ್ಯ ಕಾರಣವಾಗಿತ್ತು. ಬುಲೆಟ್ ಕಾರ್ಟ್ರಿಜ್ ಗೆ ಹಸು ಮತ್ತು ಹಂದಿಯ ಕೊಬ್ಬನ್ನು ಸವರಲಾಗಿದೆ ಎಂದು ವ್ಯಾಪಕ ವದಂತಿ ಹರಡಿ ಸೇನೆಯಲ್ಲಿದ್ದ ಹಿಂದು ಮತ್ತು ಮುಸ್ಲಿಂ ಸೈನಿಕರು ಉದ್ರಿಕ್ತರಾಗಿದ್ದರು. ಹಸು ಹಿಂದುಗಳಿಗೆ ಪೂಜನೀಯವಾಗಿದ್ದರೆ, ಹಂದಿ ಎಂದರೆ ಮುಸ್ಲಿಮರಿಗೆ ವರ್ಜ್ಯ.‌ ತಮ್ಮ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸಿಪಾಯಿಗಳು ಆ ಕೆಲಸವನ್ನು ನಿರಾಕರಿಸಿದರು. ಇದು ಭಾರತೀಯ ಸೈನಿಕರ ಸಾಮೂಹಿಕ ದಂಗೆಗೆ ಕಾರಣವಾಯಿತು.

ಸಾಮೂಹಿಕ ದಂಗೆ ಬ್ರಿಟಿಷ್ ಅಧಿಕಾರಿಗಳ ಮೇಲೆ ದಾಳಿ ಮಾಡಲು ಪಾಂಡೆಯನ್ನು ಪ್ರೇರೇಪಿಸಿತು. ಬ್ರಿಟಿಷ್ ಅಧಿಕಾರಿ ಮೇಜರ್ ಹ್ಯೂಸನ್ ಮತ್ತು ಲೆಫ್ಟಿನಂಟ್ ಭಾಘ್ ಮೇಲೆ ಮಂಗಲ್ ಪಾಂಡೆ, 1857, ಮಾರ್ಚ್ 29 ರಂದು ಗುಂಡಿನ ದಾಳಿ ನಡೆಸಿ ಅವರಿಬ್ಬರನ್ನೂ ನೆಲಕ್ಕುರುಳಿಸಿದ್ದರು. ಪರಿಣಾಮವಾಗಿ ಮಂಗಲ್ ಪಾಂಡೆಯವರನ್ನು ಬ್ರಿಟಿಷ್ ಸೇನೆ ಬಂಧಿಸಿತು. ಈ ಸಂದರ್ಭದಲ್ಲಿ ಲಕ್ಷಾಂತರ ಭಾರತೀಯರ ಹೃದಯದಲ್ಲಿ ರಾಷ್ಟ್ರೀಯತೆಯ ಜ್ವಾಲೆಯನ್ನು ಬೆಳಗಿಸಲು ಮಂಗಲ್ ಪಾಂಡೆ ಆತ್ಮಾರ್ಪಣೆ ಮಾಡಿಕೊಳ್ಳುವುದಕ್ಕೆ ನಡೆಸಿದ ಪ್ರಯತ್ನವೂ ವಿಫಲವಾಗಿತ್ತು. ಗಾಯಗೊಂಡಿದ್ದ ಮಂಗಲ್ ಪಾಂಡೆಯವರನ್ನು ಬ್ರಿಟೀಶ್ ಸರ್ಕಾರದ ಆದೇಶದ ಮೇರೆಗೆ ಏಪ್ರಿಲ್ 8 1857ರಂದು ಬ್ಯಾರಕ್ಪುರ(ಕೋಲ್ಕತ್ತ)ದಲ್ಲಿ ಗಲ್ಲಿಗೇರಿಸಲಾಯಿತು.

ಇಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಕಾರಣದಿಂದಾಗಿ ನಮ್ಮ ದೇಶ ಸ್ವಾತಂತ್ರ್ಯವಾಗಿದೆ. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮುಂದಿದೆ.‌ ನಾವು ಜವಾಬ್ದಾರಿಯುತ ಮತ್ತು ಸುಶಿಕ್ಷಿತ ನಾಗರಿಕರು ಎಂದು ಎನಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಂಗಲ ಪಾಂಡೆಯವರಂತ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ನಿಸ್ವಾರ್ಥ ಹೋರಾಟ ನಮ್ಮ ಪೀಳಿಗೆಯ ಮಕ್ಕಳಿಗೆ ಮಾದರಿಯಾಗಬೇಕು.

Tags: #74th Independence Daycelebrating the Independence of 74 yearsfreedomnewssacrificesShahid Mangal Pandeystruggles
ShareTweetSendShare
Join us on:

Related Posts

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ?; ದೂರುಗಳ ಬಗ್ಗೆ ತನಿಖೆ: ಸಚಿವ ಖಾದರ್

by Shwetha
August 28, 2026
0

ಆನ್‌ಲೈನ್ ವೇದಿಕೆಗಳ ಮೂಲಕ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಹಾಗೂ ಆಕರ್ಷಕವಾಗಿ ಕಾಣುವಂತೆ ಮಾಡಲು ಅಪಾಯಕಾರಿ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ...

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ಪ್ರಧಾನಿ ಮೋದಿ ಸಂಘಟನೆಗೆ ನೊಂದಣಿ ಭಾಗ್ಯ!-ಆರ್‌ಎಸ್‌ಎಸ್ ನೊಂದಣಿ ಶುಲ್ಕ ನಾನೇ ಕಟ್ಟುತ್ತೇನೆ: ಸಂಘದ ಅಸ್ತಿತ್ವಕ್ಕೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಒಂದು ನೊಂದಾಯಿತ ಸಂಸ್ಥೆಯಲ್ಲ ಎಂದು ಪುನರುಚ್ಚರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಘಟನೆಯನ್ನು ಕಾನೂನಾತ್ಮಕ ಚೌಕಟ್ಟಿಗೆ ತರುವಂತೆ ಬಹಿರಂಗ ಸವಾಲು ಹಾಕಿದ್ದಾರೆ....

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ಕಣಕ್ಕೆ ಇಳಿದರೆ ಜಯ ಗ್ಯಾರಂಟಿನಾ!ಬೀದಿ ಹೋರಾಟದ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತರುವುದೇ? – ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಚ್ಚರಿಯ ವರದಿ

ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ಕಣಕ್ಕೆ ಇಳಿದರೆ ಜಯ ಗ್ಯಾರಂಟಿನಾ!ಬೀದಿ ಹೋರಾಟದ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತರುವುದೇ? – ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಅಚ್ಚರಿಯ ವರದಿ

by Shwetha
August 28, 2026
0

ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದ ಕಾಕ್ರೋಚ್ ಜನತಾ ಪಾರ್ಟಿ ಅಥವಾ ಸಿಜೆಪಿ ಚುನಾವಣಾ ರಾಜಕೀಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram