ನವದೆಹಲಿ: ಭಾರತ ದೇಶ ಈ ವರ್ಷ ರಣ ಬಿಸಿಲಿಗೆ ತೆರೆದುಕೊಂಡಿದೆ. ಈ ಬಾರಿ ದಾಖಲೆಯ ಬಿಸಿಲು ದಾಖಲಾಗುತ್ತಲೇ ಇದೆ. ಮೊನ್ನೆಯಷ್ಟೇ ದೆಹಲಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲಾಗಿತ್ತು. ಇದೇ ದಾಖಲೆ ಎಂದು ಎಲ್ಲರೂ ಶಾಕ್ ಆಗಿದ್ದರು. ಆದರೆ, ಶುಕ್ರವಾರ ಮಹಾರಾಷ್ಟ್ರದ ನಾಗ್ಪುರದಲ್ಲಿ (Nagpura, Maharastra) ಬರೋಬ್ಬರಿ 56 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
ಹೀಗಾಗಿ ಬಿಸಿಲಿನ ತಾಪಮಾನಕ್ಕೆ ಇಲ್ಲಿಯವರೆಗೆ 210ಕ್ಕೂ ಅಧಿಕ ಜನ ಬಲಿಯಾಗಿದ್ದಾರೆ. ನಾಗ್ಪುರದ ಉತ್ತರ ಅಂಬಾಜರಿ ರಸ್ತೆಯ ಐಎಂಡಿ ಕೇಂದ್ರದಲ್ಲಿ 56 ಡಿಗ್ರಿ ತಾಪಮಾನ ದಾಖಲಾಗಿದೆ. ಸೊನೆಗಾಂವ್ನಲ್ಲಿ 54 ಡಿಗ್ರಿ ತಾಪಮಾನ ದಾಖಲಾಗಿದೆ. ಉತ್ತರ ಭಾರತದಲ್ಲಿ ರಣಬಿಸಿಲಿಗೆ ಕಳೆದ 24 ಗಂಟೆಯಲ್ಲಿ 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಜನ ಮೃತಪಟ್ಟಿದ್ದಾರೆ. ಈವರೆಗೂ 210ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಉತ್ತರಪ್ರದೇಶವೊಂದರಲ್ಲಿಯೇ (Uttarpradesh) ಬಿಸಿಗಾಳಿಯ ಶಾಖಾಘಾತಕ್ಕೆ 160ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಆಘಾತಕ್ಕೆ ಕಾರಣವಾಗಿದೆ. ವಾರಣಾಸಿಯಲ್ಲಿ 34. ಬಿಹಾರದಲ್ಲಿ 65, ಒಡಿಶಾದಲ್ಲಿ 41, ಜಾರ್ಖಂಡ್ನ ರಾಂಚಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ, ರಾಜಸ್ಥಾನ, ಹರಿಯಾಣ, ಪಂಜಾಬ್, ಬಿಹಾರ, ಉತ್ತರಪ್ರದೇಶದಲ್ಲಿ ಉಷ್ಣಾಂಶ 45 ಡಿಗ್ರಿಗೂ ಹೆಚ್ಚಿದೆ.