ದೇಶದಲ್ಲಿ ಎನ್.ಪಿ.ಆರ್ ಜಾರಿ ಮಾಡಲು ಬಿಡುವುದಿಲ್ಲ ಎಂಬ ನಿರ್ಣಯವೊಂದನ್ನು ರಾಜ್ಯ ಕಾಂಗ್ರೆಸ್ ಪಾಸು ಮಾಡಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಇಂದು ಶಾಸಕಾಂಗ ಸಭೆ ನಡೆದಿದೆ. ಸಭೆಯಲ್ಲಿ ದೇಶ ಮತ್ತು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎನ್.ಪಿ.ಆರ್., ಎನ್.ಆರ್.ಸಿ, ಮತ್ತು ಸಿಏಏ ವಿರೋಧಿಸಿ ನಡೆದ ಚಳುವಳಿಗಳ ಬಗ್ಗೆ ಗಂಬೀರವಾಗಿ ಚರ್ಚೆ ಮಾಡಲಾಗಿದೆ ಚರ್ಚೆಯ ಬಳಿಕ ದೇಶದಲ್ಲಿ ಎನ್.ಪಿ.ಆರ್ ಜಾರಿ ಮಾಡಲು ಬಿಡುವುದಿಲ್ಲ ಎಂಬ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಪಾಸ್ ಮಾಡಲಾಗಿದೆ. ಈ ಬಗ್ಗೆ ನೂತನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಶಾಸಕ ಈ ತುಕರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...








